ಸಾಂದರ್ಭಿಕ ಚಿತ್ರ 
ಆರೋಗ್ಯ

ಥೈರಾಯ್ಡ್ ನಿಂದ ಕೂದಲು ಮತ್ತು ಚರ್ಮದ ಮೇಲೆ ಆಗುವ ಪರಿಣಾಮಗಳೇನು?

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ. ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ..

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ.  ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ಈ ಗ್ರಂಥಿಯಿಂದಾಗಿ ಹಾರ್ಮೋನ್ ಗಳ ವ್ಯತ್ಯಾಸ ಹಾಗೂ ಕೆಲವು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳಿರುತ್ತವೆ.
ದೇಹದಲ್ಲಿರುವ ಪ್ರತಿಯೊಂದು ಗ್ರಂಥಿ ಹಾಗೂ ಅಂಗಾಂಗಗಳು ನಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದು. ಅದರಲ್ಲೂ ಥೈರಾಯ್ಡ್ ಗ್ರಂಥಿಗಳು ಹಾರ್ಮೊನನ್ನು ಬಿಡುಗಡೆ ಮಾಡುವುದರಿಂದ ಚಯಾಪಚಾಯ, ದೇಹದ ಉಷ್ಣತೆ ಮತ್ತು ನಾಡಿಬಡಿತ ಕ್ರಿಯೆಯು ನಿಯಂತ್ರಣದಲ್ಲಿರುತ್ತದೆ. ಈ ಮೂರರಲ್ಲಿ ಯಾವುದೇ ರೀತಿಯ ಏರುಪೇರು ಆದರೂ ಅದರಿಂದ ಯಕೃತ್, ಕರುಳು, ಕಿಡ್ನಿ ಮತ್ತು ಸಂತಾನೋತ್ಪತ್ತಿಯ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗುವುದು.
ಅದರಲ್ಲು ಮುಖ್ಯವಾಗಿ ಚರ್ಮ ಮತ್ತು ಕೂದಲಿನ ಮೇಲೆ ಥೈರಾಯ್ಡ್ ಹೆಚ್ಚು ಪರಿಣಾಮ ಬೀರುತ್ತದೆ., ಥೈರಾಯ್ಡ್ ಇರುವವರಿಗೆ ಅಂಗೈ ಬೆವರುತ್ತದೆ ಹಾಗೂ ಯಾವುದೇ ಗಾಯವಾದರೇ ಅದನ್ನು ಬೇಗ ಒಣಗಲು ಬಿಡುವುದಿಲ್ಲ,
ಒಣ ಹಾಗೂ ತುರಿಕೆ ಉಂಟು ಮಾಡುವ ಚರ್ಮವು ಥೈರಾಯ್ಡ್ ಗ್ರಂಥಿಯ ಸಮಸ್ಯೆಯ ಪ್ರಮುಖ ಲಕ್ಷಣವಾಗಿದೆ. ಉಗುರು ಉದ್ದಗಿನ ಗೆರೆಯಂತೆ ಒಡೆದುಹೋಗಿದ್ದರೆ ಇದರ ಬಗ್ಗೆ ನೀವು ಚಿಂತಿಸಬೇಕು. ಇದು ಥೈರಾಯ್ಡ್ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಥೈರಾಯ್ಡ್ ಇದ್ದರೆ ಮುಖ ವಯಸ್ಸಾದಂತೆ ಕಾಣುತ್ತದೆ.
ಕೂದಲು ಉದುರುವ ಸಮಸ್ಯೆ ಥೈರಾಯ್ಡ್ ರೋಗ, ಸ್ವರಕ್ಷಿತ ರೋಗ ದೇಹದ ಬೆಳವಣಿಗೆಗೆ ಅಗತ್ಯವಾದ ತ್ರಿಯಡೋಥೈರಾಯಿನ್ ಮತ್ತು ಥೈರಾಕ್ಸಿನ್ ಎಂಬ ಹಾರ್ಮೋನುಗಳು ಥೈರಾಯಿಡ್ ನಲ್ಲಿರುತ್ತವೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದಲ್ಲಿ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ.
ಇನ್ನೂ ಥೈರಾಯ್ಡ್ ರೋಗ ಇರುವವರಗ ಕತ್ತಿನ ಹಿಂಬಾಗದ ಚರ್ಮ ಬಣ್ಣದಲ್ಲಿ ಬದಲಾವಣೆಯಾಗುತ್ತದೆ. ಪಿಗ್ಮೆಂಟೇಶನ್ ಉಂಟಾಗುತ್ತದೆ. 
ಈಗ ಥೈರಾಯ್ಡ್ ಸರ್ವೇ ಸಾಮಾನ್ಯ ಕಾಯಿಲೆ ಎಂಬಂತಾಗಿದೆ, ಹೀಗಾಗಿ ಆರೋಗ್ಯಯುತ ಜೀವನಶೈಲಿಯಿಂದಾಗಿ ಥೈರಾಯ್ಡ್ ತಡೆಗಟ್ಟಬಹುದಾಗಿದೆ, ಧೂಮಪಾನ, ಸರಿಯಾದ ಪಥ್ಯ ಪಾಲನೆ ಮಾಡದಿರುವುದು ಥೈರಾಯ್ಡ್ ಗೆ ಕಾರಣವಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ