ಸಾಂದರ್ಭಿಕ ಚಿತ್ರ 
ಆರೋಗ್ಯ

ಥೈರಾಯ್ಡ್ ನಿಂದ ಕೂದಲು ಮತ್ತು ಚರ್ಮದ ಮೇಲೆ ಆಗುವ ಪರಿಣಾಮಗಳೇನು?

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ. ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ..

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ.  ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ಈ ಗ್ರಂಥಿಯಿಂದಾಗಿ ಹಾರ್ಮೋನ್ ಗಳ ವ್ಯತ್ಯಾಸ ಹಾಗೂ ಕೆಲವು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳಿರುತ್ತವೆ.
ದೇಹದಲ್ಲಿರುವ ಪ್ರತಿಯೊಂದು ಗ್ರಂಥಿ ಹಾಗೂ ಅಂಗಾಂಗಗಳು ನಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದು. ಅದರಲ್ಲೂ ಥೈರಾಯ್ಡ್ ಗ್ರಂಥಿಗಳು ಹಾರ್ಮೊನನ್ನು ಬಿಡುಗಡೆ ಮಾಡುವುದರಿಂದ ಚಯಾಪಚಾಯ, ದೇಹದ ಉಷ್ಣತೆ ಮತ್ತು ನಾಡಿಬಡಿತ ಕ್ರಿಯೆಯು ನಿಯಂತ್ರಣದಲ್ಲಿರುತ್ತದೆ. ಈ ಮೂರರಲ್ಲಿ ಯಾವುದೇ ರೀತಿಯ ಏರುಪೇರು ಆದರೂ ಅದರಿಂದ ಯಕೃತ್, ಕರುಳು, ಕಿಡ್ನಿ ಮತ್ತು ಸಂತಾನೋತ್ಪತ್ತಿಯ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗುವುದು.
ಅದರಲ್ಲು ಮುಖ್ಯವಾಗಿ ಚರ್ಮ ಮತ್ತು ಕೂದಲಿನ ಮೇಲೆ ಥೈರಾಯ್ಡ್ ಹೆಚ್ಚು ಪರಿಣಾಮ ಬೀರುತ್ತದೆ., ಥೈರಾಯ್ಡ್ ಇರುವವರಿಗೆ ಅಂಗೈ ಬೆವರುತ್ತದೆ ಹಾಗೂ ಯಾವುದೇ ಗಾಯವಾದರೇ ಅದನ್ನು ಬೇಗ ಒಣಗಲು ಬಿಡುವುದಿಲ್ಲ,
ಒಣ ಹಾಗೂ ತುರಿಕೆ ಉಂಟು ಮಾಡುವ ಚರ್ಮವು ಥೈರಾಯ್ಡ್ ಗ್ರಂಥಿಯ ಸಮಸ್ಯೆಯ ಪ್ರಮುಖ ಲಕ್ಷಣವಾಗಿದೆ. ಉಗುರು ಉದ್ದಗಿನ ಗೆರೆಯಂತೆ ಒಡೆದುಹೋಗಿದ್ದರೆ ಇದರ ಬಗ್ಗೆ ನೀವು ಚಿಂತಿಸಬೇಕು. ಇದು ಥೈರಾಯ್ಡ್ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಥೈರಾಯ್ಡ್ ಇದ್ದರೆ ಮುಖ ವಯಸ್ಸಾದಂತೆ ಕಾಣುತ್ತದೆ.
ಕೂದಲು ಉದುರುವ ಸಮಸ್ಯೆ ಥೈರಾಯ್ಡ್ ರೋಗ, ಸ್ವರಕ್ಷಿತ ರೋಗ ದೇಹದ ಬೆಳವಣಿಗೆಗೆ ಅಗತ್ಯವಾದ ತ್ರಿಯಡೋಥೈರಾಯಿನ್ ಮತ್ತು ಥೈರಾಕ್ಸಿನ್ ಎಂಬ ಹಾರ್ಮೋನುಗಳು ಥೈರಾಯಿಡ್ ನಲ್ಲಿರುತ್ತವೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದಲ್ಲಿ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ.
ಇನ್ನೂ ಥೈರಾಯ್ಡ್ ರೋಗ ಇರುವವರಗ ಕತ್ತಿನ ಹಿಂಬಾಗದ ಚರ್ಮ ಬಣ್ಣದಲ್ಲಿ ಬದಲಾವಣೆಯಾಗುತ್ತದೆ. ಪಿಗ್ಮೆಂಟೇಶನ್ ಉಂಟಾಗುತ್ತದೆ. 
ಈಗ ಥೈರಾಯ್ಡ್ ಸರ್ವೇ ಸಾಮಾನ್ಯ ಕಾಯಿಲೆ ಎಂಬಂತಾಗಿದೆ, ಹೀಗಾಗಿ ಆರೋಗ್ಯಯುತ ಜೀವನಶೈಲಿಯಿಂದಾಗಿ ಥೈರಾಯ್ಡ್ ತಡೆಗಟ್ಟಬಹುದಾಗಿದೆ, ಧೂಮಪಾನ, ಸರಿಯಾದ ಪಥ್ಯ ಪಾಲನೆ ಮಾಡದಿರುವುದು ಥೈರಾಯ್ಡ್ ಗೆ ಕಾರಣವಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT