ಸಂಗ್ರಹ ಚಿತ್ರ 
ಆರೋಗ್ಯ

ಲಾಕ್'ಡೌನ್ ನಿಂದಾಗಿ ವ್ಯಾಯಾಮ ಮಾಡ್ತಿಲ್ವ? ಮಧುಮೇಹ ರೋಗಿಗಳೇ ಎಚ್ಚರ... ಆರೋಗ್ಯ ಅಪಾಯಕ್ಕೆ ಸಿಲುಕೀತು!

ಜಿಮ್, ವರ್ಕೌಟ್ ಎಂದು ಫಿಟ್ನೆಸ್ ಕಾಪಾಡಿಕೊಳ್ಳುತ್ತಿದ್ದ ಜನರೆಲ್ಲಾ ಇಂದು ಲಾಕ್'ಡೌನ್ ಎಫೆಕ್ಟ್'ನಿಂದಾಗಿ ಮನೆಯಲ್ಲಿಯೇ ಕುಳಿತು, ವ್ಯಾಯಾಮದಿಂದ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ವ್ಯಾಯಾಮ ಮಾಡಬಹುದಾದರೂ ಜಿಮ್, ಸ್ಪೋರ್ಟ್ಸ್ ಕ್ಲಬ್ ಗಳಿಗೆ ಹೋಗಿ ಮಾಡುವಷ್ಟು...  

ಜಿಮ್, ವರ್ಕೌಟ್ ಎಂದು ಫಿಟ್ನೆಸ್ ಕಾಪಾಡಿಕೊಳ್ಳುತ್ತಿದ್ದ ಜನರೆಲ್ಲಾ ಇಂದು ಲಾಕ್'ಡೌನ್ ಎಫೆಕ್ಟ್'ನಿಂದಾಗಿ ಮನೆಯಲ್ಲಿಯೇ ಕುಳಿತು, ವ್ಯಾಯಾಮದಿಂದ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ವ್ಯಾಯಾಮ ಮಾಡಬಹುದಾದರೂ ಜಿಮ್, ಸ್ಪೋರ್ಟ್ಸ್ ಕ್ಲಬ್ ಗಳಿಗೆ ಹೋಗಿ ಮಾಡುವಷ್ಟು ಎಫೆಕ್ವಿವ್ ಇರುವುದಿಲ್ಲ ಎಂದು ಸೋಮಾರಿತನ ಪಡುತ್ತಿರುವ ಜನರು ವ್ಯಾಯಾಮಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ಆದರೆ, ವ್ಯಾಯಾಮ ಮಾಡದಿರುವ ಮದುಮೇಹ ರೋಗಿಗಳ ಆರೋಗ್ಯ ಅಪಾಯದಲ್ಲಿರಲಿದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ. 

ಸಕ್ಕರೆ ಕಾಯಿಲೆ ಇರುವ ರೋಗಿಗಳು ಪ್ರಸ್ತುತದ ಪರಿಸ್ಥಿತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಲಾಕ್ ಡೌನ್'ಗೆ ಮುನ್ನ ಹಲವು ಮಧಮೇಹ ರೋಗಿಗಳ ಆರೋಗ್ಯ ಸ್ಥಿರವಾಗಿತ್ತು. ಆದರೆ, ಇದೀಗ ಸಮಸ್ಯೆಗಳು ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಇದೀಗ ನಾವು ರೋಗಿಗಳಿಗೆ ಕೆಲ ವ್ಯಾಯಾಮಗಳನ್ನು ಹಾಗೂ ಔಷಧಿಗಳನ್ನು ನೀಡಲು ಆರಂಭಿಸಿದ್ದೇವೆಂದು ವಿಕ್ರಮ್ ಆಸ್ಪತ್ರೆಯ ಡೈಯಾಬಿಟಾಲೋಜಿ ಎಂಡೋಕ್ರಿನೊಲೊಜಿಸ್ಟ್ ಡಾ.ಪ್ರಿಯಾ ಚನ್ನಪ್ಪ ಅವರು ಹೇಳಿದ್ದಾರೆ. 

ಮಣಿಪಾಲ್ ಆಸ್ಪತ್ರೆಯ ಡೈಯಾಬಿಟಾಲೋಜಿ ಎಂಡೋಕ್ರಿನೊಲೊಜಿಸ್ಟ್ ಡಾ.ಕಾರ್ತಿಕ್ ಪ್ರಭಾಕರ್ ಅವರು ಮಾತನಾಡಿ, ಕಳೆದ ವಾರ ಫೋನ್ ಮೂಲಕ 60 ಮಂದಿ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ ನೀಡಿದ್ದೇನೆ. ಲಾಕ್ ಡೌನ್ ನಿಂದಾಗಿ ಜನರ ಜೀವನಶೈಲಿ ಬದಲಾಗಿದೆ. ಮಧುಮೇಹ ರೋಗಿಗಳ ವ್ಯಾಯಾಮ ಹಾಗೂ ಡಯಟ್ ಎಂದಿನಂತಿಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ರೋಗಿಗಳಲ್ಲಿನ ಒತ್ತಡ ಹಾಗೂ ಆತಂಕ ಹೆಚ್ಚಾಗುತ್ತಿದೆ. ರೋಗಿಗಳಿಗೆ ನೀಡುತ್ತಿದ್ದ ಇನ್ಸುಲಿನ್ ಹಾಗೂ ಔಷಧಿಗಳನ್ನು ಬದಲಿಸುತ್ತಿದ್ದೇವೆ. ಮೆಟ್ಟಿಲುಗಳನ್ನು ಹತ್ತಿ ಇಳಿದು ವ್ಯಾಯಾಮ ಮಾಡುವಂತೆ ತಿಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಸಿಎಂಐ ಆಸ್ಪತ್ರೆಯ ಎಂಡೋಕ್ರಿನಾಲಜಿ ಕನ್ಸಲ್ಟೆಂಟ್ ಡಾ.ಮಹೇಶ್ ಡಿಎಂ ಮಾತನಾಡಿ, ಮನೆಯಲ್ಲಿಯೇ ವ್ಯಾಯಾಮ ಮಾಡಲು ಸಾಧ್ಯವಿದೆ. ಯೋಗಾ, ಸ್ಕಿಪ್ಪಿಂಗ್, ವಾಕಿಂಗ್, ರನ್ನಿಂಗ್ ನಂತಹ ವ್ಯಾಯಾಮ ಮಾಡಬಹುದು. ಕೈಗಳಿಂದ ಕೂಡ ವ್ಯಾಯಾಮಗಳನ್ನು ಮಾಡಬಹುದು ಎಂದು ತಿಳಿಸಿದ್ದಾರೆ. 

ಮಧುಮೇಹ ರೋಗಿಗಳಿಗೆ ಡಾ.ಮಹೇಶ್ ಅವರು ಕೆಲ ಸಲಹೆಗಳನ್ನು ನೀಡಿದ್ದು, ಅವುಗಳು ಇಂತಿವೆ...

  • ದೇಹ ನಿರ್ಜಲೀಕರಣಗೊಳ್ಳದಂತೆ ನೋಡಿಕೊಳ್ಳಿ. 
  • ಆರೋಗ್ಯಕರ, ಸಮತೋಲಿತ ಆಹಾರ ಸೇವನೆ ಮಾಡಿ. 
  • ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಿ. ಇನ್ಸುಲಿನ್ ಕೂಡ ಸಮಯಕ್ಕೆ ತೆಗೆದುಕೊಳ್ಳಿ. 
  • ಗ್ಲುಕೋಮೀಟರ್ ಗಳ ಮೂಲಕ ಮನೆಯಲ್ಲಿಯೇ ಆಗಾಗ ಸಕ್ಕರೆ ಪ್ರಮಾಣವನ್ನು ತಪಾಸಣೆ ಮಾಡಿಕೊಳ್ಳಿ. 
  • ಫೋನ್ ಮೂಲಕ ವೈದ್ಯರೊಂದಿಗೆ ಸಂಪರ್ಕದಲ್ಲಿರಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT