ಮೊಟ್ಟೆ 
ಆರೋಗ್ಯ

ದಿನಕ್ಕೊಂದು ಮೊಟ್ಟೆ ಮಧುಮೇಹಕ್ಕೂ ಕಾರಾಣವಾಗಬಹುದು: ಸಂಶೋಧಕರ ಎಚ್ಚರಿಕೆ

ಮೊಟ್ಟೆಯಿಂದ ತಯಾರಿಸಲಾಗುವ ಉಪಹಾರಗಳು ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ. ಆದರೆ ದಿನವೊಂದಕ್ಕೆ ಒಂದು ಮೊಟ್ಟೆಯನ್ನು ತಿನ್ನುವುದರಿಂದ ಮಧುಮೇಹಕ್ಕೂ ಆಹ್ವಾನ ನೀಡಿದಂತಾಗಲಿದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಸಂಶೋಧಕರು. 

ಮೊಟ್ಟೆಯಿಂದ ತಯಾರಿಸಲಾಗುವ ಉಪಹಾರಗಳು ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ. ಆದರೆ ದಿನವೊಂದಕ್ಕೆ ಒಂದು ಮೊಟ್ಟೆಯನ್ನು ತಿನ್ನುವುದರಿಂದ ಮಧುಮೇಹಕ್ಕೂ ಆಹ್ವಾನ ನೀಡಿದಂತಾಗಲಿದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಸಂಶೋಧಕರು. 

ದಿನವೊಂದಕ್ಕೆ ಒಂದು ಅಥವಾ ಒಂದಕ್ಕಿಂತ ಹೆಚ್ಚು ಮೊಟ್ಟೆ ಸೇವಿಸುವವರಿಗೆ ಮಧುಮೇಹ ಎದುರಾಗುವ ಸಾಧ್ಯತೆ ಶೇ.60 ರಷ್ಟು ಹೆಚ್ಚಾಗಿರುತ್ತದೆ, ­ಪ್ರಮುಖವಾಗಿ ಮಹಿಳೆಯರಲ್ಲಿ ಈ ಪ್ರಮಾಣ ಹೆಚ್ಚು ಎಂದು (1991-2009) ವರೆಗೆ ನಡೆದ ಚೀನಾದ ವೈದ್ಯಕೀಯ ವಿವಿ ಹಾಗೂ ಕತಾರ್ ನ ಲಾಂಗಿಟ್ಯೂಡಿನಲ್ ಅಧ್ಯಯನದಿಂದ ತಿಳಿದುಬಂದಿದೆ. 

ಈ ಅಧ್ಯಯನ ವರದಿಯಲ್ಲಿ ತೊಡಗಿಸಿಕೊಂಡಿರುವ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮತ್ತು ಸಾರ್ವಜನಿಕ ಆರೋಗ್ಯ ತಜ್ಞ ಮಿಂಗ್ ಲಿ ಮಾತನಾಡಿ, ಮಧುಮೇಹದ ಏರಿಕೆ ಹೆಚ್ಚುತ್ತಿರುವ ಆತಂಕವಾಗಿದೆ ಎಂದು ಹೇಳಿದ್ದು

ಡಯೆಟ್ ಎನ್ನುವುದು ಟೈಪ್2 ಮಧುಮೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾರಣವಾಗಲಿದೆ, ಡಯೆಟ್ ನ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಹಾಗೂ ಪ್ರಸ್ತುತ ಮಧುಮೇಹದ ಬೆಳವಣಿಗೆಯ ಬಗ್ಗೆ ಅರಿವುದು ಅತ್ಯಂತ ಮುಖ್ಯ ಎಂದು ಮಿಂಗ್ ಅಭಿಪ್ರಾಯಪಟ್ಟಿದ್ದಾರೆ. 

ಚೀನಾದಲ್ಲಿ 1991 ರಿಂದ 2009 ವರೆಗೆ ಮೊಟ್ಟೆ ಸೇವನೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಈ ಅವಧಿಯಲ್ಲಿ ಮೊಟ್ಟೆ ಸೇವನೆ ಮಾಡುವವರ ಸಂಖ್ಯೆ ದ್ವಿಗುಣಗೊಂಡಿದೆ ಎನ್ನುತ್ತದೆ ಬ್ರಿಟಿಷ್ ಜರ್ನಲ್ ಆಫ್ ನ್ಯೂಟ್ರೀಷನ್ ವರದಿ ಪ್ರಕಟಿಸಿದೆ. 

ಚೀನಿಯರಲ್ಲಿ ಮೊಟ್ಟೆಯನ್ನು ತಿನ್ನುವುದು ಹಾಗೂ ಮಧುಮೇಹಕ್ಕೂ ಇರುವ ನಂಟು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ, ಇನ್ನೂ ಹೆಚ್ಚಿನ ಅಂಶಗಳೆಡೆಗೆ ಸಂಶೋಧನೆ ನಡೆಯುವುದು ಅಗತ್ಯ ಎಂದು ಸಂಶೋಧಕರು ಹೇಳಿದ್ದಾರೆ. ಚೀನಾ ಹೆಲ್ತ್-ನ್ಯೂಟ್ರಿಷನ್ ಸಮೀಕ್ಷೆಯಲ್ಲಿ 8,545 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT