ಸಂಗ್ರಹ ಚಿತ್ರ 
ಆರೋಗ್ಯ

ಬಾಯಿಯ ವಸಡಿನ ಮೇಲೆ ಬ್ಲ್ಯಾಕ್ ಫಂಗಸ್ ಗಂಭೀರ ಪರಿಣಾಮ: ಮುಂಜಾಗ್ರತೆ ಹೇಗೆ? ಇಲ್ಲಿದೆ ಮಾಹಿತಿ...

ಇಡೀ ವಿಶ್ವಕ್ಕೆ ತಲೆನೋವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕ ರೋಗ ವೈದ್ಯಕೀಯ ಲೋಕಕ್ಕೆ ಪ್ರತಿನಿತ್ಯ ಒಂದಲ್ಲ ಒಂದು ಸವಾಲುಗಳನ್ನು ಎಸೆಯುತ್ತಲೇ ಇದೆ. ಸಾಂಕ್ರಾಮಿಕ ರೋಗದಿಂದ ಪಾರಾಗಲು ಹೋರಾಡುತ್ತಿರುವ ಭಾರತಕ್ಕೆ ಇದೀಗ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕರ್ಮೈಕೋಸಿಸ್ ತಲೆನೋವು ಶುರುವಾಗಿದೆ. 

ಇಡೀ ವಿಶ್ವಕ್ಕೆ ತಲೆನೋವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕ ರೋಗ ವೈದ್ಯಕೀಯ ಲೋಕಕ್ಕೆ ಪ್ರತಿನಿತ್ಯ ಒಂದಲ್ಲ ಒಂದು ಸವಾಲುಗಳನ್ನು ಎಸೆಯುತ್ತಲೇ ಇದೆ. ಸಾಂಕ್ರಾಮಿಕ ರೋಗದಿಂದ ಪಾರಾಗಲು ಹೋರಾಡುತ್ತಿರುವ ಭಾರತಕ್ಕೆ ಇದೀಗ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕರ್ಮೈಕೋಸಿಸ್ ತಲೆನೋವು ಶುರುವಾಗಿದೆ. 

ಈ ಬ್ಲ್ಯಾಕ್ ಫಂಗಸ್ ಕೊರೋನಾ ವೈರಸ್ ಗಿಂತಲೂ ಅಪಾಯಕಾರಿ ಹಾಗೂ ಮಾರಣಾಂತಿಕವಾಗಿದೆ. ಈ ರೋಗ ಹೆಚ್ಚಾಗಿ ಬಾಯಿಯ ವಸಡಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. 

ಮಧುಮೇಹ ಅಧಿಕ ಇದ್ದವರಿಗೆ  ಬ್ಲ್ಯಾಕ್‌ ಫ‌ಂಗಸ್‌ ಹೆಚ್ಚಾಗಿದೆ (ಮ್ಯೂಕರ್ಮೈಕೋಸಿಸ್) ಬರುತ್ತಿದೆ. ಸ್ಟಿರಾಯ್ಡಾ ಔಷಧವನ್ನು ಕೊಟ್ಟಾಗ ಮಧುಮೇಹ ಹೆಚ್ಚಾಗುತ್ತದೆ. ಮಧುಮೇಹ ಇಲ್ಲದವರಿಗೆ ಕೊರೋನಾ ಬಂದರೆ ಮಧುಮೇಹ ಹೊಸದಾಗಿ ಅಂಟಿಕೊಳ್ಳುತ್ತಿದೆ. ಮಧುಮೇಹ ನಿಯಂತ್ರಣದಲ್ಲಿದ್ದವರಿಗೆ ಕೋವಿಡ್ ಬಂದರೆ ಒಮ್ಮೆಲೆ ಅಧಿಕವಾಗುತ್ತಿದೆ. ಕೊರೋನಾ ನಿಯಂತ್ರಿಸಲು ಸ್ಟಿರಾಯ್ಡ್ ಕೊಡಬೇಕಾಗುತ್ತದೆ. ಆಗ ಮಧುಮೇಹ ಜಾಸ್ತಿಯಾಗುತ್ತದೆ. ಇಂತಹ ಸಂದರ್ಭಕ್ಕಾಗಿಯೇ ಮ್ಯೂಕರ್ಮೈಕೋಸಿಸ್ ಫ‌ಂಗಸ್‌ ಕಾದು ಕುಳಿತಿರುತ್ತದೆ. ಇಂತಹವರನ್ನೇ ಫ‌ಂಗಸ್‌ ಆಶ್ರಯಿಸುತ್ತಿದೆ.

ಕೊರೊನಾ ಸೋಂಕು ಬಂದು ಉಸಿ ರಾಟದ ಸಮಸ್ಯೆಯಾದಾಗ ಸಹಜವಾಗಿ ಆಕ್ಸಿಜನ್‌ ಅಗತ್ಯವಾಗುತ್ತದೆ. ಆಕ್ಸಿಜನ್‌ ಬೇಡಿಕೆ ಹೆಚ್ಚಾದ ಕಾರಣ ಎಲ್ಲಿ ಆಕ್ಸಿಜನ್‌ ಸಿಗುತ್ತದೋ ಅಲ್ಲಿಂದ ತರುವ ಸ್ಥಿತಿ ಇದೆ. ಹೀಗಾಗಿ ಕೈಗಾರಿಕಾ ಆಕ್ಸಿಜನ್‌ ಕೂಡ ಬಳಕೆ ಮಾಡಲಾಗುತ್ತಿದೆ 

ಕೈಗಾರಿಕಾ ಆಕ್ಸಿಜನ್‌ ಅಷ್ಟು ಶುದ್ಧ ಆಗಿರುವುದಿಲ್ಲ. ಇದರಲ್ಲಿ ಸ್ವಲ್ಪವಾದರೂ ಮಿಶ್ರಣ ಇರುತ್ತದೆ. ಆಕ್ಸಿಜನ್‌ ಕಾನ್ಸಂಟ್ರೇಟರ್‌ ಬಳಕೆಯಾಗುತ್ತಿದೆ. ಇದು ವಿದೇಶಗಳಿಂದ ದೇಣಿಗೆಯಾಗಿಯೂ ಬರುತ್ತಿದೆ. ಆಕ್ಸಿಜನ್‌ ಅನ್ನು ನೇರವಾಗಿ ಕೊಡಲು ಆಗುವುದಿಲ್ಲ, ನೀರಿನ ಮೂಲಕವೇ ಕೊಡಬೇಕು. ಆಗ ಬಹಳ ಜಾಗರೂಕತೆಯಿಂದ ಶುದ್ಧ ನೀರನ್ನು ಬಳಸಬೇಕು. ಎಲ್ಲ ಕಡೆ ಶುದ್ಧ ನೀರು ಸಿಗುತ್ತದೆಯೆ? ಎಲ್ಲ ಮನೆಗಳಲ್ಲಿಯೂ, ಎಲ್ಲ ಆಸ್ಪತ್ರೆಗಳಲ್ಲಿಯೂ ಇದನ್ನು ನಿರೀಕ್ಷಿಸುವುದು ಕಷ್ಟಸಾಧ್ಯ. ಯಾವುದೋ ನಳ್ಳಿ ನೀರನ್ನು ಬಳಸಿದರೆ ಅಪಾಯವಿದೆ. ಆದ್ದರಿಂದ ಪರಿಶುದ್ಧ ನೀರನ್ನೇ ಉಪಯೋಗಿಸಬೇಕು. ಈ ಎಲ್ಲಾ ಕಾರಣಗಳಿಂದ ಇತ್ತೀಚಿನ ದಿನಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗ ಹೆಚ್ಚಾಗುತ್ತಿದೆ. 

ಮ್ಯೂಕರ್ಮೈಕೋಸಿಸ್ ತೆಲಂಗಾಣ ರಾಜ್ಯವನ್ನು ಹೆಚ್ಚು ಬಾಧಿಸುತ್ತಿದೆ. ಅಲ್ಲಿನ ಆರೋಗ್ಯ ಇಲಾಖೆ ಇದನ್ನು ಸಾಂಕ್ರಾಮಿಕ ಎಂದು ಅಧಿಕೃತವಾಗಿ ಘೋಷಿಸಿದೆ. 

ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶಕರು ನೀಡಿದ ಅಧಿಸೂಚನೆಯ ಪ್ರಕಾರ, ಇದು ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಸೂಚಿಸಬಹುದಾದ ಕಾಯಿಲೆಯಾಗಿದೆ ಎನ್ನಲಾಗಿದೆ. ಈ ಕಪ್ಪು ಶಿಲೀಂಧ್ರವು ಮುಖ್ಯವಾಗಿ ಕಣ್ಣು, ಕಿವಿ ಮತ್ತು ಬಾಯಿಯ ಕುಹರದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ಬಾಯಿಯ ಮೇಲಿನ ಪರಿಣಾಮ ಕುರಿತು ಪ್ರತಿಕ್ರಿಯೆ ನೀಡಿರುವ, ಮಹೇಂದ್ರ ದಂತ ಆಸ್ಪತ್ರೆಯ ಮುಖ್ಯ ಸಲಹೆಗಾರ ಡಾ. ಸಮೀರ್ ಆಜಾದ್ ಮಹೇಂದ್ರ ಅವರು, ಮ್ಯೂಕರ್ಮೈಕೋಸಿಸ್ ಬಾಯಿಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಕೋವಿಡ್-19 ರಿಂದ ಚೇತರಿಸಿಕೊಂಡ ರೋಗಿಗಳಿಗೆ ಕನಿಷ್ಠ ಒಂದು ತಿಂಗಳಾದರೂ ನಿಯಮಿತವಾಗಿ ಮೌಖಿಕ ತಪಾಸಣೆಗೆ ನಡೆಸಬೇಕು ವೈದ್ಯರು ಸಲಹೆ ನೀಡುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದ್ದಾರೆ. ಪ್ರಮುಖವಾಗಿ ಮಧುಮೇಹ ಇರುವವರಿಗೆ ಸಲಹೆ ನೀಡಲೇಬೇಕಿದೆ. ಬಾಯಿಯಲ್ಲಿ ಶುರುವಾಗುವ ಈ ಸೋಂಕು ರೋಗವನ್ನು ಉಲ್ಭಣಿಸುತ್ತದೆ ಎಂದು ತಿಳಿಸಿದ್ದಾರೆ. 

ನಮ್ಮ ಸುತ್ತಲಿನ ಗಾಳಿಯಲ್ಲಿ ಬ್ಲ್ಯಾಕ್ ಫಂಗಸ್ ಇದೆ ಎಂಬುದನ್ನು ಜನರು ಅರಿಯಬೇಕಿದೆ. ನಾವು ಅದನ್ನು ಉಸಿರಾಡುತ್ತಿದ್ದೇವೆ. ಆದರೆ, ನಮ್ಮ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡುತ್ತಿದೆ. ಸೋಂಕಿಗೊಳಗಾಗಿರುವ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ, ಅವರಿಗೆ ಬ್ಲ್ಯಾಕ್ ಫಂಗಸ್ ವಿರುದ್ಧ ಹೋರಾಡಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. 

ಹಾಗಾದರೆ ಸೋಂಕಿನಿಂದ ಚೇತರಿಸಿಕೊಂಡವರು ಬ್ಲ್ಯಾಕ್ ಫಂಗಸ್ ರೋಗದಿಂದ ದೂರ ಉಳಿಯಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳಾದರೂ ಯಾವುವು? 

  • ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳಲು ಲವಯುಕ್ತ ಬಿಸಿ ನೀರಿನಿಂದ ಗಾರ್ಗಿಲ್ ಮಾಡಬೇಕು. ಉಪ್ಪು ನೀರಿನಲ್ಲಿ ಗಂಟಲು ಶುದ್ಧ ಮಾಡುವ ಪ್ರಕ್ರಿಯೆ ಎಲ್ಲರಿಗೂ ಗೊತ್ತಿದೆ. ಕ್ಲೊರೆಕ್ಸಿಡಿನ್‌ ಮೌತ್‌ ವಾಶ್‌ ಸಿಗುತ್ತದೆ. ಇದರಿಂದ ಗಂಟಲು ಶುದ್ಧ ಮಾಡಿದರೆ ಫ‌ಂಗಸ್‌ ಸಾಯುತ್ತದೆ.
  • ಬಿಸಿ ನೀರಿನ ಆವಿಯನ್ನು ತೆಗೆದುಕೊಳ್ಳುವಾಗ ಒಂದೆರಡು ಹನಿ ನೀಲಗಿರಿ ಎಣ್ಣೆಯನ್ನು ಹಾಕಿ ತೆಗೆದುಕೊಳ್ಳಿ. ಇದಕ್ಕೆ ಫ‌ಂಗಸ್‌ ಅನ್ನು ಕೊಲ್ಲುವ ಶಕ್ತಿ ಇರುತ್ತದೆ.
  • ಕೊರೋನಾ ಬಂದ ಬಳಿಕ ಆಕ್ಸಿಜನ್‌ ಕಾನ್ಸಂಟ್ರೇಟರ್‌ ನ ಯಂತ್ರವನ್ನು ಮನೆಯಲ್ಲಿರಿಸಿಕೊಂಡು ಬಳಸುತ್ತಿದ್ದಾರೆ. ಇದಕ್ಕೆ ನೀರು ಹಾಕಬೇಕಾಗುತ್ತದೆ. ಸಾಮಾನ್ಯವಾಗಿ ನಳ್ಳಿ ನೀರನ್ನು ಹಾಕುತ್ತಾರೆ. ಇದು ಸರಿಯಲ್ಲ. ನಳ್ಳಿ ನೀರಿನಲ್ಲಿಯೂ ಫ‌ಂಗಸ್‌ ಬರುವ ಸಾಧ್ಯತೆ ಇದೆ. ಆದ್ದರಿಂದ ಡಿಸ್ಟಿಲ್‌ ವಾಟರ್‌ (ಪ್ಯೂರಿಫೈಡ್‌ ವಾಟರ್‌) ಅಥವಾ ಬಿಸಿ ಮಾಡಿ ಆರಿದ ನೀರನ್ನು ಹಾಕಬೇಕು.
  • ಸೋಂಕಿನಿಂದ ಗುಣಮುಖರಾದವರು ಸಾಧ್ಯವಾದಷ್ಟು ಹೆಚ್ಚೆಚ್ಚು ಪ್ರೋಟೀನ್ ಇರುವ ಆಹಾರ, ಸಕ್ಕರೆ ಅಂಶ ಕಡಿಮೆ ಇರುವ ಆಹಾರ, ವಿಟಮಿನ್ ಎ.ಇ ಮತ್ತು ಬಿ ಸತ್ವಗಳಿರುವ ಆಹಾರ ಸೇವನೆ ಮಾಡುವುದು ಉತ್ತಮ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT