ಕಣ್ಣಿನ ತಪಾಸಣೆ (ಸಾಂಕೇತಿಕ ಚಿತ್ರ) TNIE
ಆರೋಗ್ಯ

ಮುಖ್ಯಮಂತ್ರಿಗಳಿಂದ ಆಶಾ ಕಿರಣ ಯೋಜನೆಗೆ ನಾಳೆ ಚಾಲನೆ

ಸಿಎಂ ಸಿದ್ದರಾಮಯ್ಯ ನಾಳೆ ಆಶಾ ಕಿರಣ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಾಳೆ ಆಶಾ ಕಿರಣ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂಧತ್ವ ಹಾಗೂ ದೃಷ್ಟಿ ದುರ್ಬಲತೆಯನ್ನು ನಿಯಂತ್ರಣ ಮಾಡುವುದಕ್ಕೆ ರಾಷ್ಟ್ರೀಯ ಯೋಜನೆಯ ಆಶ್ರಯದಲ್ಲಿ ಈ ಆಶಾ ಕಿರಣ ಯೋಜನೆ ಹಾವೇರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಆಶಾ ಕಿರಣ ಯೋಜನೆಯಡಿ ಎಲ್ಲಾ ವಯೋಮಾನದವರಿಗೆ ಸಮಗ್ರ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ.

ದೃಷ್ಟಿ ದೋಷವುಳ್ಳವರಿಗೆ ಉಚಿತ ಕನ್ನಡಕ ನೀಡಲಾಗುತ್ತದೆ ಹಾಗೂ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ತಪ್ಪಿಸಲು ಸಾಧ್ಯವಿರುವ ಅಂಧತ್ವಕ್ಕೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಉದ್ದೇಶದಿಂದ, 'ಆಶಾ ಕಿರಣ'ವನ್ನು ಈಗಾಗಲೇ ಎಂಟು ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ ಮತ್ತು ಚಾಮರಾಜನಗರ, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಶಾ ಕಿರಣ ಯೋಜನೆಯನ್ನು ಜಾರಿಗೊಳಿಸಲಾಗಿದೆ. "ಈ ಉಪಕ್ರಮಗಳು ಭರವಸೆಯ ಫಲಿತಾಂಶಗಳನ್ನು ನೀಡಿವೆ, ಲಕ್ಷಾಂತರ ವ್ಯಕ್ತಿಗಳು ಕಣ್ಣಿನ ಆರೋಗ್ಯ ಸೇವೆಗಳ ಲಭ್ಯತೆಯಲ್ಲಿ ಪ್ರಯೋಜನ ಪಡೆಯುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಎಲ್ಲಾ ವಯೋಮಾನದ ವ್ಯಕ್ತಿಗಳಿಗೆ ಪ್ರಾಥಮಿಕ ಕಣ್ಣಿನ ತಪಾಸಣೆಯನ್ನು ನೇರವಾಗಿ ಅವರ ಮನೆಗಳಲ್ಲಿ ನಡೆಸುತ್ತಾರೆ" ಎಂದು ಸರ್ಕಾರ ತಿಳಿಸಿದೆ.

"ಸ್ಕ್ರೀನಿಂಗ್ ಸಮಯದಲ್ಲಿ ಕಣ್ಣಿನ ತೊಂದರೆ ಇರುವವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ದ್ವಿತೀಯ ತಪಾಸಣೆಗಾಗಿ ಕಳುಹಿಸಲಾಗುತ್ತದೆ. ಕನ್ನಡಕ ಅಗತ್ಯವಿರುವ ವ್ಯಕ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಅವರ ದೃಷ್ಟಿ ದುರ್ಬಲತೆಯ ಮಟ್ಟವನ್ನು ಆಧರಿಸಿ ಉಚಿತವಾಗಿ ಚಿಕಿತ್ಸೆ, ಕನ್ನಡಕ ಪಡೆಯುತ್ತಾರೆ. ಸರ್ಕಾರಿ ಆಸ್ಪತ್ರೆಗಳು ಮತ್ತು ನೋಂದಾಯಿತ ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳಲ್ಲಿ ಕಣ್ಣಿನ ಪೊರೆ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT