ಪ್ಯಾರಾಸಿಟಮಲ್ 
ಆರೋಗ್ಯ

ಸಣ್ಣ ತೊಂದರೆಗೂ ಪ್ಯಾರಾಸಿಟಮಲ್ ಸೇವಿಸುತ್ತಿದ್ದೀರಾ? ಹಾಗಾದರೆ ಅಪಾಯ ಕಟ್ಟಿಟ್ಟ ಬುತ್ತಿ!

ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ.

ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ.

ಹೌದು.. ಸಣ್ಣ ತೊಂದರೆಗಳಿಗೂ ಪ್ಯಾರಸೆಟಮಾಲ್‌ ನುಂಗುವ ಅಭ್ಯಾಸ ಹೆಚ್ಚಿರುವ ಈ ಹೊತ್ತಿನಲ್ಲಿ, ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನಕಾರರು ಮಹತ್ವದ ವರದಿ ನೀಡಿದ್ದು, ಹೆಚ್ಚು ಪ್ಯಾರಸಿಟಮಲ್ ಸೇವನೆಯಿಂದ ನಮ್ಮ ಲಿವರ್ ಗೆ ಹಾನಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಾವು ನುಂಗುವ ಔಷಧಗಳು ಅತಿಯಾದರೆ ನಮ್ಮ ಯಕೃತ್ತಿನ ಆರೋಗ್ಯವನ್ನೇ ನುಂಗಿ ಹಾಕುತ್ತವೆ ಎಂದು ಇತ್ತೀಚಿನ ಅಧ್ಯಯನಗಳು ಬಹಿರಂಗ ಪಡಿಸಿವೆ.

ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನದಲ್ಲೇನಿದೆ?

ಪ್ರತಿ ಸಣ್ಣ ವಿಷಯಕ್ಕೂ, ವೈದ್ಯರ ಸಲಹೆ ಇಲ್ಲದೆ ಪ್ಯಾರಸೆಟಮಾಲ್ ಅಥವಾ ನೋವಿನ ಮಾತ್ರೆಗಳನ್ನು ನುಂಗುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳು ಕೆಲವೊಮ್ಮೆ ಶಾಶ್ವತವೂ ಆಗಬಹುದು. ಇದು ಅಂಗಾಂಗ ವೈಫಲ್ಯಕ್ಕೂ ದಾರಿ ಮಾಡುತ್ತದೆ ಎಂದು ಅಧ್ಯಯನದಲ್ಲಿ ಎಚ್ಚರಿಸಲಾಗಿದೆ. ಪ್ರಮುಖವಾಗಿ ಭಾರತದಲ್ಲಿ ಬಳಸುವ ಪ್ಯಾರಸೆಟಮಾಲ್ ಪ್ರಮಾಣಕ್ಕಿಂತ ಪಶ್ಚಿಮ ದೇಶಗಳಲ್ಲಿ ಪ್ಯಾರಸೆಟಮಾಲ್ ಅಥವಾ ಅಸೆಟೋಮೆನೊಫಿನ್ ಬಳಸುವ ಪ್ರಮಾಣ ಹೆಚ್ಚು. ಆದರೆ ಕೋವಿಡ್‌ ನಂತರದ ದಿನಗಳಲ್ಲಿ ಪ್ಯಾರಸೆಟಮಾಲ್ ಬಳಸುವ ಪ್ರಮಾಣ ಎಲ್ಲಾ ದೇಶಗಳಲ್ಲಿ ಮೊದಲಿಗಿಂತ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಇಂಥ ಅಧ್ಯಯನಗಳು ಮಹತ್ವ ಪಡೆದಿವೆ.

ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನ

ಯಕೃತ್ತಿಗೆ ಹಾನಿ

ರೋಗದ ಉಪಶಮನಕ್ಕಾಗಿ ಬಳಸುವ ಈ ಔಷಧಗಳು ಮಿತಿ ಮೀರಿದರೆ ಅಪಾಯಗಳಿಗೆ ಆಹ್ವಾನ ನೀಡುತ್ತವೆ ಎಂಬುದು ಸಾಬೀತಾಗಿದೆ. ಕೆಲವು ಸಂದರ್ಭಗಳಲ್ಲಿ, ಯಕೃತ್ತಿನ ಮೇಲೆ ದುಷ್ಟಪರಿಣಾಮ ಬೀರುವ ಈ ಔಷಧಗಳು, ಅಲ್ಲಿನ ಆರೋಗ್ಯವಂತ ಕೋಶಗಳನ್ನು ಹಾಳು ಮಾಡುತ್ತವೆ ಹಾಗೂ ಅಂಗದ ವೈಫಲ್ಯಕ್ಕೂ ಕಾರಣವಾಗಬಹುದು. ಯಾವುದೇ ಕೋಶಗಳು ತಮ್ಮ ಅಂಗಗಳ ಗೋಡೆಯ ಜೊತೆಗಿನ ಸಂಪರ್ಕವನ್ನು ಕಳೆದುಕೊಂಡರೆ ಆಪತ್ತು ಎದುರಾಗುತ್ತದೆ. ಇದರಿಂದ ಆ ಕೋಶಗಳು ಕ್ರಮೇಣ ಸಾಯಬಹುದು. ಇಂಥ ಸಂದರ್ಭಗಳಲ್ಲಿ ಅಂಗಗಳು ಪೂರ್ಣ ಅಥವಾ ಭಾಗಶಃ ಹಾನಿಗೊಂಡು ವಿಫಲವೂ ಆಗಬಹುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT