ನಿಖಿಲ್ ಕುಮಾರಸ್ವಾಮಿ 
ಸುದ್ದಿಗಳು

ಫಲಿಸದ ತಾಯಿಯ ಕ್ಷೇತ್ರ ತ್ಯಾಗ: ತಂದೆಯ ಭದ್ರಕೋಟೆಯಲ್ಲೇ ಸೋತ ಮಗ; ಎಲ್ಲಿಯೂ ಸಲ್ಲದ ನಿಖಿಲ್ ಕುಮಾರಸ್ವಾಮಿ!

ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ರಾಮನಗರ: ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ  ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು

ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT