ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು 
ಸುದ್ದಿಗಳು

ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ, 46,163 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರನ್ನು ಸೋಲಿಸಿದ್ದಾರೆ. ಉಳಿದಂತೆ ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರು 1, 22, 392 ಮತಗಳ ಅಂತರದಿಂದ ಸಮೀಪದ ಜೆಡಿಎಸ್ ಅಭ್ಯರ್ಥಿ ಬಿ ನಾಗರಾಜು ಅವರನ್ನು ಸೋಲಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆರ್. ಅಶೋಕ ಠೇವಣಿ ಕಳೆದುಕೊಂಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್, 53, 953 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ಮಣಿಸಿದ್ದಾರೆ.  ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ನಾಯಕ ಸಿಎನ್ ಅಶ್ವತ್ಥ ನಾರಾಯಣ 41, 302 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅನೂಫ್ ಐಯ್ಯಂಗಾರ್ ಅವರನ್ನು ಸೋಲಿಸಿದ್ದಾರೆ. 

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ 34,289 ಮತಗಳ ಅಂತರದಿಂದ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಎದುರು ಸೋಲೊಪ್ಪಿಕೊಂಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಜೆ. ಸಿ. ಮಾಧುಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಬಿ. ಸುರೇಶ್ ಬಾಬು ಎದುರು 10.642 ಮತಗಳ ಅಂತರಿಂದ ಸೋತಿದ್ದಾರೆ.

ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, 13, 640 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಣಿಕಾಂತ್ ರಾಥೋಡ್ ಅವರನ್ನು ಸೋಲಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರನ್ನು 10, 642 ಮತಗಳ ಅಂತರದಿಂದ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಸೋಲಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ 5,926 ಮತಗಳ ಅಂತರದಿಂದ ಸಿ.ಟಿ. ರವಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಡಿ. ತಮ್ಮಯ್ಯ ಸೋಲಿನ ರುಚಿ ತೋರಿಸಿದ್ದಾರೆ. 

ಹೊಳೆ ನರಸೀಪುರದಲ್ಲಿ ಜೆಡಿಎಸ್ ನ ಹೆಚ್ ಡಿ ರೇವಣ್ಣ 3,152 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಸ್ ಪಟೇಲ್ ಅವರನ್ನು ಮಣಿಸಿದ್ದಾರೆ. ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ್ ತನ್ನ ಸಮೀಪದ ಜೆಡಿಎಸ್ ಅಭ್ಯರ್ಥಿ ಪಿ.ಆರ್. ಸುಧಾಕರ್ ಲಾಲ್ ಅವರನ್ನು 14, 347 ಮತಗಳ ಅಂತರದಿಂದ ಮಣಿಸಿದ್ದಾರೆ.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು 10,715 ಮತಗಳ ಅಂತರದಿಂದ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ಸೋಲಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರನ್ನು 12,241 ಮತಗಳ ಅಂತರದಿಂದ ಬಿಜೆಪಿಯ ಆರಗ ಜ್ಞಾನೇಂದ್ರ ಸೋಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT