ಜನಾರ್ದನ ರೆಡ್ಡಿ 
ಸುದ್ದಿಗಳು

ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ, ಕಾಂಗ್ರೆಸ್‌ಗೆ ನನ್ನ ಬೆಂಬಲ: ಗಾಲಿ ಜನಾರ್ದನ ರೆಡ್ಡಿ

‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ

ಕೊಪ್ಪಳ: ‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಹೃದಯಾಘಾತದಿಂದ ಬಳಲುತ್ತಿರುವ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೆಆರ್‌ಪಿಪಿ' ಐದರಿಂದ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಮತ್ತೆ ಬಿಜೆಪಿ ಜೊತೆ ಕೈ ಜೋಡಿಸಲು ಸಾಧ್ಯವಿಲ್ಲ. ಹೀಗಾಗಿ, ಅತಂತ್ರ ವಿಧಾನಸಭೆ ರಚನೆಯಾದರೆ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿ ನನಗೆ ಮಾಡಿದ ಮೋಸ ಎಲ್ಲರಿಗೂ ಗೊತ್ತಿದೆ. ಆದ್ದರಿಂದ ಆ ಪಕ್ಷದ ಜೊತೆ ಹೋಗುವುದಿಲ್ಲ. ಗಂಗಾವತಿ ಕ್ಷೇತ್ರದಲ್ಲಿ ನಾನು, ಬಳ್ಳಾರಿ ನಗರದಲ್ಲಿ ನನ್ನ ಪತ್ನಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾನ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KRPP) ಬೆಂಬಲ ನೀಡುತ್ತದೆ ಎಂದು ಹೇಳಿದ್ದರು.

ರಾಜ್ಯದ 49 ಕ್ಷೇತ್ರಗಳಲ್ಲಿ ಇತ್ತೀಚೆಗೆ ಸ್ಥಾಪನೆ ಮಾಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT