ಲಕ್ಷ್ಮಣ ಸವದಿ 
ಸುದ್ದಿಗಳು

ಅಥಣಿ- ಜಾರಿಬಿದ್ದ ಜಾರಕಿಹೊಳಿ: ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲು

ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸವದಿಗೆ ಗೆಲುವು ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT