ಸೌಮ್ಯ ರೆಡ್ಡಿ - ದಿನೇಶ್ ಗುಂಡೂರಾವ್ 
ಸುದ್ದಿಗಳು

105 ಮತಗಳಿಂದ ದಿನೇಶ್ ಗುಂಡೂರಾವ್, 160 ಮತಗಳಿಂದ ಸೌಮ್ಯ ರೆಡ್ಡಿ ಪ್ರಯಾಸದ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜಧಾನಿ ಬೆಂಗಳೂರಿನ ಹೃದಯ ಭಾಗವಾದ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜಧಾನಿ ಬೆಂಗಳೂರಿನ ಹೃದಯ ಭಾಗವಾದ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್ ಕೇವಲ 105 ಮತಗಳ ಅಂತರದಿಂದ ಪ್ರಯಾಸದ ಗೆಲುವು ಸಾಧಿಸಿದ್ದಾರೆ. 

ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಅವರು 113 ಮತಗಳಿಂದ ಗೆಲುವು ಸಾಧಿಸಿದರು. ಆದರೆ, ಕಡಿಮೆ ಅಂತರದಲ್ಲಿ ಗೆದ್ದ ಹಿನ್ನಲೆ ಮರು ಎಣಿಕೆ ಮಾಡುವಂತೆ ಸಪ್ತಗಿರಿ ಗೌಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು. ಮರು ಎಣಿಕೆ ನಂತರ ದಿನೇಶ್ ಗುಂಡೂರಾವ್ ಅವರು ಕೇವಲ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜಿದ್ದಾಜಿದ್ದಿ ಇದ್ದ ಕ್ಷೇತ್ರ ಗಾಂಧಿನಗರ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಮಚಂದ್ರ ಗೌಡ ಅವರ ಪುತ್ರ ಸಪ್ತಗಿರಿ ಗೌಡ ಸ್ಪರ್ಧಿಸಿದ್ರು. ಹಾಗೇ ಜೆಡಿಎಸ್‌ ಪಕ್ಷದಿಂದ ವಿ. ನಾರಾಯಣಸ್ವಾಮಿ, ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದರು. 

ಇನ್ನು ಬೆಂಗಳೂರಿನ ಜಯನಗರ ಕ್ಷೇತ್ರದಲ್ಲಿ ಕೇವಲ 160 ಮತಗಳ ಅಂತರದಲ್ಲಿ ಸೌಮ್ಯ ರೆಡ್ಡಿ ಅವರು ಸಹ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ ಪಾಳಯ ರೀ ಕೌಂಟಿಂಗ್‌ ಆಗಬೇಕು ಎಂದು ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT