ಜಮೀರ್ ಮತ್ತು ಭಾಸ್ಕರ್ ರಾವ್ 
ಸುದ್ದಿಗಳು

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚಾಮರಾಜಪೇಟೆಯಲ್ಲಿ ಜಮೀರ್ ಗೆ 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ 16 ಸುತ್ತಿನ ಮತಎಣಿಕೆ ಪೈಕಿ ಈಗ 4 ಸುತ್ತಿನ ಮತಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಜಮೀರ್ ಅಹ್ಮದ್ ಖಾನ್ 24633 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು 3890 ಮತಗಳನ್ನು ಪಡೆದಿದ್ದಾರೆ. ಅಂತೆಯೇ ಜೆಡಿಎಸ್ ಅಭ್ಯರ್ಥಿ ಸಿ ಗೋವಿಂದರಾಜ್ 3235 ಮತಗಳನ್ನು ಪಡೆದಿದ್ದಾರೆ.

ಉಳಿದಂತೆ ಬಿಎಸ್ ಪಿ ಅಭ್ಯರ್ಥಿ ನರಸಿಂಹ ಮೂರ್ತಿ 322 ಮತಗಳನ್ನು ಪಡೆದಿದ್ದಾರೆ. 251 ಮತಗಳು ನೋಟಾ ಪಾಲಾಗಿದ್ದು, ಆಪ್ ಅಭ್ಯರ್ಥಿ ಜಗದೀಶ್ ಚಂದ್ರ 185 ಮತಗಳನ್ನು ಪಡೆದಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ವಿ ಸೋಮಶೇಖರ್ 98 ಮತಗಳನ್ನು ಪಡೆದಿದ್ದಾರೆ.

ಈದ್ಗಾ ಮೈದಾನ ವಿಚಾರವಾಗಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಹಿಂದೂಪರ ಸಂಘಟನೆಗಳ ತೀವ್ರ ವಿರೋಧಕ್ಕೆ ತುತ್ತಾಗಿದ್ದರು. ಈದ್ಗಾ ಮೈದಾನ ವಿಚಾರ ಚುನಾವಣೆಯಲ್ಲಿ ಪರಿಣಾಮ ಬೀರಬಹುದು ಎನ್ನಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT