ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಗೆ ಸಿಹಿ ತಿನ್ನಿಸಿದ ಮಲ್ಲಿಕಾರ್ಜುನ ಖರ್ಗೆ 
ಸುದ್ದಿಗಳು

ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.

 ಇಂದು ಭಾನುವಾರ ಸಂಜೆ ಶಾಸಕಾಂಗ ಸಭೆಯನ್ನು ನಡೆಸಲಿದ್ದು, ಅದಕ್ಕಿಂದ ಮೊದಲು ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಪತ್ನಿ ಜೊತೆಗೂಡಿ ತುಮಕೂರಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವೃಷಭ ದೇಶಿಕೇಂದ್ರ ಶ್ರೀಗಳ ದರ್ಶನ ಪಡೆದಿದ್ದಾರೆ. 

ಈ ಕುರಿತು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ಶಿವಕುಮಾರ್, 'ಕಷ್ಟದಲ್ಲಿ ನನ್ನನ್ನು ಪಾರು ಮಾಡಿದ ಅಜ್ಜಯ್ಯನ ದರ್ಶನಕ್ಕೆ ಹೋಗುತ್ತಿದ್ದೇನೆ. ಎಲ್ಲಿ ಭಕ್ತಿ ಇದೆಯೋ, ಅಲ್ಲಿ ಭಗವಂತ ಇರುತ್ತಾನೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಪ್ರತಿಫಲ ಇದೆ. ಈ ಹಿಂದೆಯೇ ನಾನು 136 ನಂಬರ್​ ಬರುತ್ತೆ ಎಂದು ಹೇಳಿದ್ದೆ ಪೂರ್ಣ ಬಹುಮತವನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ. 

ಇನ್ನೂ ಕುತೂಹಲ ಪಡಬೇಕಿಲ್ಲ, ಯಾರೂ ಟೆನ್ಷನ್ ಮಾಡಿಕೊಳ್ಳಬೇಡಿ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ನಾನು ನಂಬಿರುವ ಶಕ್ತಿ ನನಗೆ ಮಾರ್ಗದರ್ಶನ ಕೊಟ್ಟಿದೆ. ಕಷ್ಟದಲ್ಲಿ ನನ್ನ ಪಾರು ಮಾಡಿದ ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ನಾನು ಹೋಗುತ್ತಿದ್ದೇನೆ, ಒಂದು ಗಂಟೆಗೆ ವಾಪಾಸ್​ ಬರುತ್ತೇನೆ ಎಂದು ಹೇಳಿದರು.

ಶಿವಕುಮಾರ್ ಸಿಎಂ ಅಭಿಯಾನ: ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಅಲ್ಲಲ್ಲಿ ಡಿ ಕೆ ಶಿವಕುಮಾರ ಅಭಿಮಾನಿಗಳು, ಡಿ ಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಬ್ಯಾನರ್, ಪೋಸ್ಟರ್ ಹಾಕಿ, ಘೋಷಣೆ ಕೂಗುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT