ಪ್ರಹ್ಲಾದ್ ಜೋಷಿ 
ಸುದ್ದಿಗಳು

ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. 

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. 

ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಲಿದ್ದು, ಅದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿಕಟವಾಗಿ ಸಹಕಾರ ನೀಡಲಿದೆ ಎಂದರು. ಬಿಜೆಪಿಯ ಕೋರ್ ಕಮಿಟಿಯು ಪಕ್ಷಕ್ಕೆ ಎಲ್ಲಿ ತಪ್ಪಾಗಿದೆ ಮತ್ತು ಅದರ ತಂತ್ರವು ಹೇಗೆ ವಿಫಲವಾಗಿದೆ ಎಂಬುದನ್ನು ವಿಶ್ಲೇಷಿಸಲು ಸಭೆ ನಡೆಸಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಆತ್ಮಾವಲೋಕನದ ನಂತರ ಪಕ್ಷವನ್ನು ಪುನರ್ ಸಂಘಟಿಸಿ ತಳಹದಿಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಸೋಲಿಗೆ ಆಡಳಿತ ವಿರೋಧಿ ಅಲೆ ಒಂದು ಕಾರಣವಾಗಿರಬಹುದು ಎಂದು ಹೇಳಿದ ಕೇಂದ್ರ ಸಚಿವರು, ಹಿನ್ನಡೆಗೆ ಇತರ ಕಾರಣಗಳು ಕೋರ್ ಕಮಿಟಿ ಸಭೆಯ ನಂತರವೇ ತಿಳಿಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video