ಸೌಮ್ಯರೆಡ್ಡಿ 
ಸುದ್ದಿಗಳು

ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಕಾನೂನು ಹೋರಾಟಕ್ಕೆ ಸೌಮ್ಯ ರೆಡ್ಡಿ ತೀರ್ಮಾನ

ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು: ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಮೊದಲ ಬಾರಿಗೆ ಮತ ಎಣಿಕೆ ನಡೆದಾಗ 160 ಮತಗಳಿಂದ ಗೆದ್ದಿರುವುದಾಗಿ ಘೋಷಿಸಲಾಗಿತ್ತು. ಆದರೆ ತದನಂತರ ಸಂಸದ ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿ ಅಕ್ರಮ ನಡೆಸಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಜಯನಗರ ಮತ ಎಣಿಕೆ ಗೊಂದಲಕ್ಕೆ ತೆರೆ: 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು!
ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರದಲ್ಲಿ ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ  294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಯಿತು.ನಂತರ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು.

ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಬೇಸಿಗೆಯಲ್ಲಿ ಬತ್ತಿದ ಬೋರ್ ವೆಲ್ ಗಳು: ಬೆಂಗಳೂರಿನ ಧೋಬಿ ಘಾಟ್ ಗಳಲ್ಲಿ ನೀರಿನ ಅಭಾವ!

SCROLL FOR NEXT