ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಿದ್ದಗಂಗಾ ಶ್ರೀಗಳು ಜನಿಸಿದ್ದು 2008ರಲ್ಲಿ: ಮುಖ್ಯಮಂತ್ರಿಯಿಂದ ಆದ ಪ್ರಮಾದ

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ...

ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬಕ್ಕೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ಗಣ್ಯರೆಲ್ಲ ನಿನ್ನೆ ಶುಭ ಕೋರಿದ್ದರು.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಶ್ರೀಗಳಿಗೆ ಶುಭಾಶಯ ಕೋರಲು ಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀಗಳು 2008ರಲ್ಲಿ ಹುಟ್ಟಿದ್ದು ಎಂದು ಹೇಳಿ ಮುಜುಗರಕ್ಕೊಳಗಾದರು.

ಆಗಿದ್ದಿಷ್ಟು: ನಿನ್ನೆ ಶಿವಕುಮಾರ ಸ್ವಾಮೀಜಿಗೆ ಶುಭಾಶಯ ತಿಳಿಸಿ ಅವರ ಕ್ಷೇಮ ಸಮಾಚಾರ ವಿಚಾರಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊರಗೆ ಸುದ್ದಿಗಾರರು ಮಾತನಾಡಿಸಿದರು. ಆಗ ಪ್ರಮಾದದಿಂದ ಸಿದ್ದರಾಮಯ್ಯನವರು 2008ರಲ್ಲಿ ಜನಿಸಿದ ಶ್ರೀಗಳು ಎಂದು ಹೇಳಿದರು, ನಂತರ ತಿದ್ದಿಕೊಂಡರು ಕೂಡ. ಇನ್ನು ಲೋಕಾಯುಕ್ತದಲ್ಲಿ 18 ಸಾವಿರ ಕೇಸುಗಳು ಇತ್ಯರ್ಥವಾಗದೆ ಬಾಕಿ ಉಳಿದಿದೆ ಎಂದು ಹೇಳುವ ಬದಲಿಗೆ ಸಾವಿರದ 800 ಕೇಸುಗಳು ಎಂದುಬಿಟ್ಟರು. ಅದನ್ನು ಕೂಡ ತಿದ್ದಿಕೊಂಡರು.

ಮುಖ್ಯಮಂತ್ರಿಗಳ ಜೊತೆ ಅವರ ಸಹೋದ್ಯೋಗಿಗಳಾದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಗಣಿ ಖಾತೆ ಸಚಿವ ಎನ್.ಬಿ.ನ್ಯಾಮ್ ಗೌಡ ಕೂಡ 109ನೇ ವಸಂತಕ್ಕೆ ಕಾಲಿಟ್ಟ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಕೆಲವು ಭಕ್ತರು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ವಿರುದ್ಧ ಆರೋಪಿಸಿ, ಇಲಾಖೆಯಲ್ಲಿ ಬೆಡ್ ಮತ್ತು ತಲೆದಿಂಬು ಕವರ್ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದರು.ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ಸ್ವಾಮೀಜಿಯವರಿಗೆ ಟ್ವಿಟ್ಟರ್ ನಲ್ಲಿ ಶುಭಾಶಯ ಹಂಚಿಕೊಂಡಿದ್ದ ಪ್ರಧಾನಿ, ಪೂಜ್ಯ ಸ್ವಾಮೀಜಿಯವರಿಗೆ ಪ್ರಣಾಮಗಳು, ಅವರ ಅದ್ವಿತೀಯ ಸೇವೆ ಮತ್ತು ಶ್ರೇಷ್ಠ ಕೆಲಸಗಳು ಹಲವರ ಜೀವನದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT