ಅಪಘಾತ 
ರಾಜ್ಯ

ಕಲಬುರಗಿ: ಲಾರಿ ಮತ್ತು ಕ್ರೂಸರ್ ಡಿಕ್ಕಿ, ಗಾಯಗೊಂಡಿದ್ದ ಐವರ ಸಾವು

ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ...

ಕಲಬುರಗಿ: ಚಿತ್ತಾಪುರದ ಬಳಿ ಕಳೆದ ರಾತ್ರಿ ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ 14 ಮಂದಿಗೆ ಗಂಭೀರ ಗಾಯಗಳಾಗಿದ್ದು, ಆ ಪೈಕಿ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಕಲಬುರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಚಿಂಚೋಳಿ ತಾಲೂಕಿನ ಎರಕಪಲ್ಲಿ ಗ್ರಾಮದ ನಿವಾಸಿಗಳಾಗಿದ್ದು ಮಹೇಶ್, ತಿಪ್ಪಣ್ಣ ಭುತಾಳೆ, ಶ್ರೀಕಾಂತ್ ಮತ್ತು ತಿರುಪತಿ ಹಾಗೂ ಸಿದ್ದಪ್ಪ ಎಂದು ಗುರುತಿಸಲಾಗಿದೆ.

ರಾಯಚೂರ ಜಿಲ್ಲೆ ಲಿಂಗಸೂಗುರನಲ್ಲಿ ಮದುವೆ ಮುಗಿಸಿಕೊಂಡು ವಾಪಾಸ್ ಬರುತ್ತಿರುವಾಗ ಅಪಘಾತ ಸಂಭವಿಸಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT