ಮೌಲ್ಯ ಮಾಪನ ಬಹಿಷ್ಕರಿಸಿ ಪ್ರಾಧ್ಯಾಪಕರ ಪ್ರತಿಭಟನೆ( ಸಂಗ್ರಹ ಚಿತ್ರ) 
ರಾಜ್ಯ

ಮೌಲ್ಯಮಾಪನ ಬಹಿಷ್ಕರಿಸಿರುವ ಪಿಯು ಪ್ರಾಧ್ಯಾಪಕರ ವಿರುದ್ಧ ಎಸ್ಮಾ ಕಾಯ್ದೆ ಹೇರಿಕೆ?

ಪದವಿ ಪೂರ್ವ ಕಾಲೇಜಿನ ಕೆಲವು ಪ್ರಾಧ್ಯಾಪಕರು ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದರಿಂದ, ಪ್ರತಿಭಟನಾ ನಿರತ ಪ್ರಾಧ್ಯಾಪಕರ ಮೇಲೆ ಎಸ್ಮಾ ಹೇರಲು ಸರ್ಕಾರದ ಚಿಂತನೆ

ಬೆಂಗಳೂರು: ಪದವಿ ಪೂರ್ವ ಕಾಲೇಜಿನ ಕೆಲವು ಪ್ರಾಧ್ಯಾಪಕರು ಮೌಲ್ಯಮಾಪನ ಪ್ರಕ್ರಿಯೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದರಿಂದ, ಪ್ರತಿಭಟನಾ ನಿರತ ಪ್ರಾಧ್ಯಾಪಕರ ಮೇಲೆ ಎಸ್ಮಾ (ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಕಾಯ್ದೆ) ಹೇರಲು ಸರ್ಕಾರ ಚಿಂತನೆ ನಡೆಸಿದೆ.
ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಾಧ್ಯಾಪಕರು ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರೊಂದಿಗೆ ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮೌಲ್ಯಮಾಪನವನ್ನು ಬಹಿಷ್ಕರಿಸಿರುವ ಪಿಯು ಪ್ರಾಧ್ಯಾಪಕರು  ಏ.4 ರಿಂದ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಒಂದು ವೇಳೆ ಪ್ರತಿಭಟನೆ ಮುಂದುವರೆದಲ್ಲಿ ಸರ್ಕಾರ ಪ್ರಾಧ್ಯಾಪಕರ ಮೇಲೆ ಎಸ್ಮಾ ಕಾಯ್ದೆಯನ್ನು ಹೇರುವ ಆಯ್ಕೆಯನ್ನು ಪರಿಗಣಿಸಿದೆ ಎನ್ನಲಾಗಿದೆ.  
ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ, ಮೌಲ್ಯಮಾಪನವನ್ನು ಮಾಡುವುದಿಲ್ಲ ಎಂದು ಪಿಯು ಪ್ರಾಧ್ಯಾಕಪರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸ್ಪಷ್ಟಪಡಿಸಿದ್ದಾರೆ. ಎರಡು ದಶಕಗಳಿಂದ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸುತ್ತಿದ್ದೇವೆ, ಬೇಡಿಕೆಗಳ ಪೈಕಿ ಒಂದನ್ನೂ ಸರ್ಕಾರ ಈಡೆರಿಸಿಲ್ಲ ಎಂದು ತಿಮ್ಮಯ್ಯ ಪುರ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಏ.3 ರಂದು ಪ್ರಾರಂಭವಾದ ಮೌಲ್ಯಮಾಪನಕ್ಕೆ  ಹಾಜರಾಗಿದ್ದ ಕೆಲವು ಶಿಕ್ಷಕರನ್ನು ಒತ್ತಾಯಪೂರ್ವಕವಾಗಿ ವಾಪಸ್ ಕರೆಸಿಕೊಳ್ಳಾಲಾಗಿದೆ. ಪ್ರತಿಭಟನೆ ಹೀಗೇ ಮುಂದುವರೆದಲ್ಲಿ ರಾಜ್ಯ ಸರ್ಕಾರ ಪಿಯು ಪ್ರಾಧ್ಯಾಪಕರ ವಿರುದ್ಧ ಎಸ್ಮಾ ಕಾಯ್ದೆ ಹೇರಲು ಯೋಚಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT