ಪೆಟ್ರೋಲ್ ಬಂಕ್ ವೊಂದರ ಬಳಿ ಜಮಾಯಿಸಿರುವ ವಾಹನ ಸವಾರರು 
ರಾಜ್ಯ

ಪೆಟ್ರೋಲ್, ಡೀಸೆಲ್ ಟ್ಯಾಂಕರ್​ಗಳ ಚಾಲಕರ ಮುಷ್ಕರ ಅಂತ್ಯ

ಮೂಲಸೌಕರ್ಯಗಳಿಗೆ ಒತ್ತಾಯಿಸಿ ತೈಲ ಸಾಗಣೆ ಟ್ಯಾಂಕರ್​ಗಳ ಚಾಲಕರು ಮತ್ತು ಕ್ಲೀನರ್​ಗಳು ನಡೆಸುತ್ತಿದ್ದ ಮುಷ್ಕರವನ್ನು ಮಂಗಳವಾರ...

ಬೆಂಗಳೂರು: ಮೂಲಸೌಕರ್ಯಗಳಿಗೆ ಒತ್ತಾಯಿಸಿ ತೈಲ ಸಾಗಣೆ ಟ್ಯಾಂಕರ್​ಗಳ ಚಾಲಕರು ಮತ್ತು ಕ್ಲೀನರ್​ಗಳು ನಡೆಸುತ್ತಿದ್ದ ಮುಷ್ಕರವನ್ನು ಮಂಗಳವಾರ ಹಿಂಪಡೆಯಲಾಗಿದೆ. 
ಚಾಲಕರು ಹಾಗೂ ಕ್ಲೀನರ್ ಸಂಘದ ಜೊತೆ ಐಒಸಿ ಅಧಿಕಾರಿಗಳು ಮತ್ತು ಪೆಟ್ರೋಲ್ ಬಂಕ್ ಮಾಲೀಕರು ನಡೆಸಿದ ಸಂಧಾನಸಭೆ ಯಶಸ್ವಿಯಾಗಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಚಾಲಕರು ಹಾಗೂ ಕ್ಲೀನರ್ ಗಳ ಸಮಸ್ಯೆಗಳ ಪರಿಹಾರಕ್ಕಾಗಿ ಮೂರು ತಿಂಗಳಲ್ಲಿ ಸಮಿತಿ ರಚಿಸಲು ಇಂದಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಸಮಿತಿ ಮುಂದೆ ಸಮಸ್ಯೆ ಹೇಳಿಕೊಳ್ಳಲು ಅವಕಾಶ ನೀಡಲಾಗಿದೆ.
ದೇವನಹಳ್ಳಿ ಮತ್ತು ಹೊಸಕೋಟೆಯಲ್ಲಿರುವ ಪೆಟ್ರೋಲ್ ಟ್ಯಾಂಕರ್ ಟರ್ವಿುನಲ್​ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ನೂರಾರು ಚಾಲಕರು, ಕ್ಲೀನರ್​ಗಳು, ಟ್ಯಾಂಕರ್ ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿ, ವಾಹನ ಸವಾರರಿಗೆ ಪರದಾಡುವಂತಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!

‘ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ’: ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!

ಖರ್ಗೆ ವೇದಿಕೆ ಶುದ್ಧೀಕರಣ ಘಟನೆ; ರಾಹುಲ್ ಗಾಂಧಿ ವಿರುದ್ಧ FIR ಸಂವಿಧಾನದ ಮೇಲಿನ ದಾಳಿ: ಸಚಿವ ಪರಮೇಶ್ವರ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?

ಐದು ವರ್ಷದ ಬಳಿಕ RCB ಸ್ಟಾರ್ ಆಟಗಾರನಿಗೆ ಗುಡ್ ನ್ಯೂಸ್; ಮತ್ತೆ ಟೀಂ ಇಂಡಿಯಾಗೆ ಕೃನಾಲ್ ಪಾಂಡ್ಯ ಎಂಟ್ರಿ?