ಪತಿ ಮೃತಪಟ್ಟ ಗಂಗಾದೇವಿ, ಮಕ್ಕಳು 
ರಾಜ್ಯ

ಗಂಡನ ವರ್ತನೆಗೆ ಬೇಸತ್ತು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಗೃಹಿಣಿ

ಗಂಡನ ವರ್ತನೆಗೆ ಬೇಸತ್ತು ಗೃಹಿಣಿಯೊಬ್ಬರು ತಮ್ಮ ಮುದ್ದಾದ ಮಕ್ಕಳಿಬ್ಬರನ್ನು ನೇಣು ಬಿಗಿದು ಹತ್ಯೆ ಮಾಡಿ ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ...

ಬೆಂಗಳೂರು: ಗಂಡನ ವರ್ತನೆಗೆ ಬೇಸತ್ತು ಗೃಹಿಣಿಯೊಬ್ಬರು ತಮ್ಮ ಮುದ್ದಾದ ಮಕ್ಕಳಿಬ್ಬರನ್ನು ನೇಣು ಬಿಗಿದು ಹತ್ಯೆ ಮಾಡಿ ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿಯ ಅಲೆಮಾರಿ ಜೀವನ ಮತ್ತು ಆರ್ಥಿಕ ಸಂಕಷ್ಟದಿಂದ ನೊಂದ 26 ವರ್ಷದ ಗಂಗಾದೇವಿ ಮಕ್ಕಳಾದ ಪಾಲ್ಪಸ (6) ಮತ್ತು ಪರ್ಬಲ್(3)ಗೆ ನೇಣು ಬಿಗಿದು ಹತ್ಯೆ ಮಾಡಿದ್ದಾರೆ. ಇನ್ನು ನೇಣು ಬಿಗಿದಿದ್ದ ಹಗ್ಗ ತುಂಡಾದ ಪರಿಣಾಮ 6 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ರಾಮಮೂರ್ತಿನಗರ ಸಮೀಪದ ಎನ್‌ಆರ್‌ಐ ಲೇಔಟ್‌ನಲ್ಲಿ ಸೋಮವಾರ ಮಧ್ಯಾಹ್ನ 12.30ರಲ್ಲಿ ಈ ದಾರುಣ ಘಟನೆ ನಡೆದಿದೆ. ನೇಪಾಳದ ಪದವೀಧರ ಪ್ರೇಮ್ ಎಂಬಾತ ಗಂಗಾದೇವಿಯನ್ನು ಮದುವೆಯಾಗಿದ್ದ. ಈ ದಂಪತಿಗೆ ಮೂವರು ಮಕ್ಕಳು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಈತ ಒಂದೆಡೆ ನೆಲಸದೆ ಅಲೆಮಾರಿ ಜೀವನ ನಡೆಸುತ್ತಿದ್ದ. ಇದರಿಂದ ಬೇಸತ್ತ ಗಂಗಾದೇವಿ ಈ ನಿರ್ಧಾರಕ್ಕೆ ಬಂದಿದ್ದಾಳೆಂದು ಪ್ರೇಮ್ ವಿಚಾರಣೆಯಲ್ಲಿ ಹೇಳಿಕೆ ನೀಡಿರುವುದಾಗಿ ಪೂರ್ವ ವಿಭಾಗ ಡಿಸಿಪಿ ಸತೀಶ್‌ಕುಮಾರ್ ತಿಳಿಸಿದ್ದಾರೆ.

ಮಕ್ಕಳನ್ನು ಹತ್ಯೆ ಮಾಡಿದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಪತಿ ಪ್ರೇಮ್ ವಿಚಾರಣೆ ನಡೆಸಲಾಗಿದೆ. ಆದರೆ, ಮೃತಳ ಸಂಬಂಧಿಕರು ಏನು ಹೇಳಿಕೆ ಕೊಡುತ್ತಾರೆ ಎಂಬುದನ್ನು ಪರಿಗಣಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT