ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಖೆಯಲ್ಲಿ ನಕಲಿ ಪ್ರಮಾಣ ಪತ್ರ ಹಗರಣ

ಸರ್ಕಾರದ ಉದ್ಯೋಗದಲ್ಲಿ ಬಡ್ತಿ ಮತ್ತು ಇತರೆ ಹಣಕಾಸು ಸೌಲಭ್ಯವನ್ನು ಪಡೆಯಲು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆ...

ಬೆಂಗಳೂರು: ಸರ್ಕಾರದ ಉದ್ಯೋಗದಲ್ಲಿ ಬಡ್ತಿ ಮತ್ತು ಇತರೆ ಹಣಕಾಸು ಸೌಲಭ್ಯವನ್ನು ಪಡೆಯಲು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಖೆಯಲ್ಲಿನ ಅಧಿಕಾರಿಗಳು ನಕಲಿ ಪ್ರಮಾಣ ಪತ್ರ ನೀಡಿರುವುದು ಬೆಳಕಿಗೆ ಬಂದಿದೆ. 
ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಕೆಯಲ್ಲಿ 12 ಅಧಿಕಾರಿಗಳು ಬಡ್ತಿ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ಪ್ರಮಾಣ ಪತ್ರಗಳನ್ನು ನೀಡಿದ್ದಾರೆಂದು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಉಪ ನಿರ್ದೇಶಕ(ಕಾರ್ಯನಿರ್ವಹಣೆ) ಎಚ್ ಎಸ್ ವರದರಾಜನ್ ಅವರು ಭಾರತೀನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ಓರ್ವ ಅಗ್ನಿ ಶಾಮಕ ಅಧಿಕಾರಿ, ಓರ್ವ ಎಫ್ ಡಿಎ ಹಾಗೂ 10 ಸಹಾಯಕ ಅಗ್ನಿ ಶಾಮಕ ಅಧಿಕಾರಿಗಳು ನಕಲಿ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ ಎಂದು ವರದರಾಜನ್ ದೂರು ದಾಖಲಿಸಿದ್ದಾರೆ.
ಈ ಎಲ್ಲಾ ಅಧಿಕಾರಿಗಳು ಬಡ್ತಿ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಎಸ್ ಎಸ್ ಎಲ್ ಸಿ ಅಂಕಪಟ್ಟಿ ಸೇರಿದಂತೆ ಇತರೆ ನಕಲಿ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ. ಇದರಿಂದ ಇಲಾಖೆಯಲ್ಲಿ ಆರ್ಥಿಕ ನಷ್ಟ ಉಂಟಾಗಿದೆ ಎಂದು ವರದರಾಜನ್ ಹೇಳಿದ್ದಾರೆ.
ಮಾರ್ಚ್ 31ರಂದು XXVIII ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ ವೆಂಕಟೇಶ್ ಅವರು ಪ್ರಕರಣ ಎಲ್ಲಾ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು. ಈ 12 ಅಧಿಕಾರಿಗಳು ಆರೋಪವನ್ನು ತಳ್ಳಿ ಹಾಕಿದ್ದು, ನಾವು ನೀಡಿರುವ ಮೂಲ ದಾಖಲೆಗಳನ್ನು ನೀಡಿದ್ದೇವೆ. ಆದರೆ, ಅದನ್ನು ಯಾರೋ ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT