ನ್ಯಾ.ಸಂತೋಷ್ ಹೆಗ್ಡೆ 
ರಾಜ್ಯ

ಎಸಿಬಿ ರಚನೆ: ಸಿಎಂ ಕ್ರಮವನ್ನು ಖಂಡಿಸಿದ ಸಂತೋಷ್ ಹೆಗ್ಡೆ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಮಾಜಿ ಲೋಕಾಯುಕ್ತ...

ತುಮಕೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಖಂಡಿಸಿದ್ದಾರೆ.
ಉನ್ನತ ಮಟ್ಟದ ಅಧಿಕಾರಿಗಳು, ಸಚಿವರು ಮತ್ತು ಮುಖ್ಯಮಂತ್ರಿಗಳ ವಿರುದ್ಧ ತನಿಖೆ ನಡೆಸಬೇಕೆಂದರೆ ಎಸಿಬಿ ಸಚಿವ ಸಂಪುಟದ ಒಪ್ಪಿಗೆ ಪಡೆಯಬೇಕಿದೆ. ಈಗಾಗಲೇ ಸಂಪುಟದಲ್ಲಿರುವ ಸಚಿವರ ಹಿನ್ನೆಲೆ ನಮಗೆ ತಿಳಿದೇ ಇದೆ ಎಂದು ಅವರು ಹೇಳಿದ್ದಾರೆ. 
ಅಷ್ಟೇ ಅಲ್ಲದೇ, ಎಸಿಬಿ ಸಿಎಂ ವಾಚ್ ಹಗರಣ ಕುರಿತು ತನಿಖೆ ನಡೆಸಲು, ಮುಖ್ಯಮಂತ್ರಿಗಳು ಸಾರ್ವಜನಿಕ ಸೇವಕರ ಅಥವಾ ಇಲ್ಲವಾ ಎಂಬುದರ ಬಗ್ಗೆ ಕಾನೂನು ಇಲಾಖೆ ಅಭಿಪ್ರಾಯ ಕೇಳಿದೆ. ಎಸಿಬಿಗೆ ಮೂಲಭೂತವೇ ತಿಳಿಯದೇ ಇರುವುದು ನಾಚಿಕೆಗೇಡು ಸಂಗತಿ ಎಂದ ಅವರು, ಲಾಲು ಪ್ರಸಾದ್ ಯಾದವ್ ಮತ್ತು ತಮಿಳುನಾಡಿನ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗಲೇ ಜೈಲಿಗೆ ಕಳುಹಿಸಿಲ್ಲವೇ ಎಂದು ವಿವರಣೆ ನೀಡಿದ್ದಾರೆ. 
ದೇಶದ 14 ರಾಜ್ಯಗಳಲ್ಲಿ ಎಸಿಬಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಬಹುದು. ಹಾಗೆಂದು ರಾಜ್ಯದಲ್ಲಿ ಲೋಕಾಯುಕ್ತ ಬಲವಾಗಿರಬೇಕಾದರೆಯೇ, ರಾಜ್ಯದ ಜನತೆ ತೊಂದರೆ ಅನುಭವಿಸಬೇಕೇ? ಕಳೆದ ಒಂದು ವರ್ಷದದಿಂದ ಕೆಲವು ಘಟನೆಗಳು ನಡೆದಿದೆ. ಹಾಗೆಂದು, ಎಸಿಬಿ ರಚನೆ ಮಾಡಿರುವುದು ಸರಿಯಲ್ಲ ಎಂದು ಸಂತೋಷ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT