ಹೈಕೋರ್ಟ್ 
ರಾಜ್ಯ

ಪಿಯುಸಿ ರಸಾಯನ ಮರು ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ದ್ವಿತೀಯ ಪಿಯು ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು...

ಬೆಂಗಳೂರು: ದ್ವಿತೀಯ ಪಿಯು ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 
ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ ನಡೆಸದಂತೆ ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಬಿ.ಎಚ್ ಚಂದ್ರಶೇಖರ್ ಸೇರಿ ಮೂವರು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ರಸಾಯನಶಾಸ್ತ್ರ ವಿಷಯದ ಮರು ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. 
ನಿಗದಿಯಂತೆ ಏ 12ರಂದು ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆ ನಡೆಯಲಿದೆ ನ್ಯಾಯಾಪೀಠ ಆದೇಶಿಸಿದೆ. 
ಮರುಪರೀಕ್ಷೆ ನಡೆಸುವುದರಿಂದ ಈಗಾಗಲೇ ಪರೀಕ್ಷೆ ಬರೆದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಅನುಭವಿಸಲಿದ್ದಾರೆ. ಪಿಯುಸಿ ಪರೀಕ್ಷೆಯ ಬಳಿಕ ವಿವಿಧ ಸ್ಪರ್ಧಾತ್ಮ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಹಂತದಲ್ಲಿ ಮರು ಪರೀಕ್ಷೆ ಮಾಡಿದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ತೊಂದರೆಯಾಗಲಿದೆ ಎಂದು ಚಂದ್ರಶೇಕರ್ ಅರ್ಜಿಯಲ್ಲಿ ತಿಳಿಸಿದ್ದರು.
ಮಾರ್ಚ್ 21ರಂದು ರಸಾಯನಶಾಸ್ತ್ರ ಪರೀಕ್ಷೆ ನಡೆದಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಮಾ.31ರಂದು ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಮತ್ತೆ 2ನೇ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ ಏ.12ಕ್ಕೆ ಮತ್ತೆ ಮರುಪರೀಕ್ಷೆ ದಿನಾಂಕ ನಿಗದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT