ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಸ್ಟಿಲ್ 
ರಾಜ್ಯ

ತುಮಕೂರು: ಚಿತ್ರ ವೀಕ್ಷಣೆ ವೇಳೆ ಪವನ್ ಕಲ್ಯಾಣ್ ಅಭಿಮಾನಿ ಹತ್ಯೆ

ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರ ಹೊಸ ಚಿತ್ರ ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಪ್ರದರ್ಶನದ ವೇಳೆ ಅಭಿಮಾನಿಯೊಬ್ಬ...

ಅನಂತಪುರ: ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರ ಹೊಸ ಚಿತ್ರ ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಪ್ರದರ್ಶನದ ವೇಳೆ ಅಭಿಮಾನಿಯೊಬ್ಬ ಮತ್ತೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಚಲನಚಿತ್ರ ಪ್ರದರ್ಶನದ ವೇಳೆ ಇಬ್ಬರ ಮಧ್ಯೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿ ಶೋ ಮುಗಿಯುವ ಹೊತ್ತಿಗೆ ಒಬ್ಬ ಇನ್ನೊಬ್ಬನನ್ನು ಇರಿದು ಕೊಲೆ ಮಾಡಿದ್ದಾನೆ. ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿರುವ ಅಲಂಕಾರ ಥಿಯೇಟರ್ ನಲ್ಲಿ ಈ ಘಟನೆ ನಡೆದಿದೆ.

21 ವರ್ಷದ ರಾಕೇಶ್ ತೆಲುಗು ನಟ  ಪವನ್ ಕಲ್ಯಾಣ್ ಅವರ ಕಟ್ಟಾ ಅಭಿಮಾನಿ. ಚಿತ್ರ ಪ್ರದರ್ಶನದ ಮಧ್ಯೆ ಹಾಡೊಂದು ಬಂದಾಗ ಎದ್ದು ನಿಂತು ಕುಣಿಯಲಾರಂಭಿಸಿದ. ಆಗ ಹಿಂದಿನ ಸೀಟಿನಲ್ಲಿ ಕುಳಿತಿದ್ದ ರವಿ ಎಂಬಾತನಿಗೆ ಅಡ್ಡವಾಯಿತು. ರಾಕೇಶ್ ನನ್ನು ಕುಳಿತುಕೊಳ್ಳುವಂತೆ ರವಿ ಸೂಚಿಸಿದನು. ಆದರೆ ಅದಕ್ಕೆ ಒಪ್ಪದೆ ಡ್ಯಾನ್ಸ್ ಮುಂದುವರಿಸಿದನು. ಸಿಟ್ಟಿನಿಂದ ರವಿ ಜಗಳ  ಮಾಡಲು ಆರಂಭಿಸಿದನು. ಕುಳಿತಿದ್ದ ಪ್ರೇಕ್ಷಕರಿಗೆ ತೊಂದರೆಯಾಗಿ ಅವರು ಬಯ್ಯಲು ಶುರು ಮಾಡಿದರು. ಸಿನಿಮಾ ಮುಗಿದ ಬಳಿಕವೂ ಹೊರಗೆ ಬಂದು ರವಿ ಮತ್ತು ರಾಕೇಶ್ ಜಗಳ ಮುಂದುವರಿಸಿದರು. ಸಿಟ್ಟಿನಲ್ಲಿ ರವಿ ರಾಕೇಶ್ ಗೆ ತಿವಿದು ಸ್ನೇಹಿತರ ಜೊತೆ ಪರಾರಿಯಾದನು.

ಗಂಭೀರ ಗಾಯಗೊಂಡಿದ್ದ ರಾಕೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ರಾಕೇಶ್ ನ ಕುಟುಂಬಸ್ಥರು ಪಾವಗಡ ಪೊಲೀಸ್ ಠಾಣೆಗೆ ದೂರು ನೀಡಿ ಆರೋಪಿ ರವಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆಗೆ ಧಾವಿಸಿದ ತುಮಕೂರು ಪೊಲೀಸ್ ಸೂಪರಿಂಟೆಂಡೆಂಟ್ ಕಾರ್ತಿಕ್ ರೆಡ್ಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲೆತ್ನಿಸಿದರು. ಕೇಸು ದಾಖಲಿಸಿರುವ ಪಾವಗಡ ಪೊಲೀಸರು ಆರೋಪಿ ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT