ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಸ್ಟಿಲ್ 
ರಾಜ್ಯ

ತುಮಕೂರು: ಚಿತ್ರ ವೀಕ್ಷಣೆ ವೇಳೆ ಪವನ್ ಕಲ್ಯಾಣ್ ಅಭಿಮಾನಿ ಹತ್ಯೆ

ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರ ಹೊಸ ಚಿತ್ರ ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಪ್ರದರ್ಶನದ ವೇಳೆ ಅಭಿಮಾನಿಯೊಬ್ಬ...

ಅನಂತಪುರ: ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರ ಹೊಸ ಚಿತ್ರ ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಪ್ರದರ್ಶನದ ವೇಳೆ ಅಭಿಮಾನಿಯೊಬ್ಬ ಮತ್ತೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಚಲನಚಿತ್ರ ಪ್ರದರ್ಶನದ ವೇಳೆ ಇಬ್ಬರ ಮಧ್ಯೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿ ಶೋ ಮುಗಿಯುವ ಹೊತ್ತಿಗೆ ಒಬ್ಬ ಇನ್ನೊಬ್ಬನನ್ನು ಇರಿದು ಕೊಲೆ ಮಾಡಿದ್ದಾನೆ. ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿರುವ ಅಲಂಕಾರ ಥಿಯೇಟರ್ ನಲ್ಲಿ ಈ ಘಟನೆ ನಡೆದಿದೆ.

21 ವರ್ಷದ ರಾಕೇಶ್ ತೆಲುಗು ನಟ  ಪವನ್ ಕಲ್ಯಾಣ್ ಅವರ ಕಟ್ಟಾ ಅಭಿಮಾನಿ. ಚಿತ್ರ ಪ್ರದರ್ಶನದ ಮಧ್ಯೆ ಹಾಡೊಂದು ಬಂದಾಗ ಎದ್ದು ನಿಂತು ಕುಣಿಯಲಾರಂಭಿಸಿದ. ಆಗ ಹಿಂದಿನ ಸೀಟಿನಲ್ಲಿ ಕುಳಿತಿದ್ದ ರವಿ ಎಂಬಾತನಿಗೆ ಅಡ್ಡವಾಯಿತು. ರಾಕೇಶ್ ನನ್ನು ಕುಳಿತುಕೊಳ್ಳುವಂತೆ ರವಿ ಸೂಚಿಸಿದನು. ಆದರೆ ಅದಕ್ಕೆ ಒಪ್ಪದೆ ಡ್ಯಾನ್ಸ್ ಮುಂದುವರಿಸಿದನು. ಸಿಟ್ಟಿನಿಂದ ರವಿ ಜಗಳ  ಮಾಡಲು ಆರಂಭಿಸಿದನು. ಕುಳಿತಿದ್ದ ಪ್ರೇಕ್ಷಕರಿಗೆ ತೊಂದರೆಯಾಗಿ ಅವರು ಬಯ್ಯಲು ಶುರು ಮಾಡಿದರು. ಸಿನಿಮಾ ಮುಗಿದ ಬಳಿಕವೂ ಹೊರಗೆ ಬಂದು ರವಿ ಮತ್ತು ರಾಕೇಶ್ ಜಗಳ ಮುಂದುವರಿಸಿದರು. ಸಿಟ್ಟಿನಲ್ಲಿ ರವಿ ರಾಕೇಶ್ ಗೆ ತಿವಿದು ಸ್ನೇಹಿತರ ಜೊತೆ ಪರಾರಿಯಾದನು.

ಗಂಭೀರ ಗಾಯಗೊಂಡಿದ್ದ ರಾಕೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ರಾಕೇಶ್ ನ ಕುಟುಂಬಸ್ಥರು ಪಾವಗಡ ಪೊಲೀಸ್ ಠಾಣೆಗೆ ದೂರು ನೀಡಿ ಆರೋಪಿ ರವಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆಗೆ ಧಾವಿಸಿದ ತುಮಕೂರು ಪೊಲೀಸ್ ಸೂಪರಿಂಟೆಂಡೆಂಟ್ ಕಾರ್ತಿಕ್ ರೆಡ್ಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲೆತ್ನಿಸಿದರು. ಕೇಸು ದಾಖಲಿಸಿರುವ ಪಾವಗಡ ಪೊಲೀಸರು ಆರೋಪಿ ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT