ಪಿಯು ಪ್ರಾಧ್ಯಾಪಕರ ಪ್ರತಿಭಟನೆ 
ರಾಜ್ಯ

ಪಿಯು ಪ್ರಾಧ್ಯಾಪಕರೊಂದಿಗಿನ ಸರ್ಕಾರದ ಮಾತುಕತೆ ಮತ್ತೊಮ್ಮೆ ವಿಫಲ: ಮೌಲ್ಯಮಾಪನ ಬಹಿಷ್ಕಾರ ಮುಂದುವರಿಕೆ

ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರೊಂದಿಗೆ ರಾಜ್ಯ ಸರ್ಕಾರ ನಡೆಸಿರುವ ಮತ್ತೊಂದು ಸುತ್ತಿನ ಮಾತುಕತೆ ವಿಫಲವಾಗಿದೆ.

ಬೆಂಗಳೂರು: ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರೊಂದಿಗೆ ರಾಜ್ಯ ಸರ್ಕಾರ ನಡೆಸಿರುವ ಮತ್ತೊಂದು ಸುತ್ತಿನ ಮಾತುಕತೆ ವಿಫಲವಾಗಿದೆ.
ಪ್ರಾಥಮಿಕ- ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನಾ ನಿರತ ಉಪನ್ಯಾಸಕರೊಂದಿಗೆ ಸಭೆ ನಡೆಸಿದರು. ಆದರೆ ವೇತನ ತಾರತಮ್ಯ ವಿಷಯದ ಬಗ್ಗೆ ಒಮ್ಮತ ಮೂಡದೇ ಸಭೆ ವಿಫಲವಾಗಿದೆ. ಸಭೆಯ ನಂತರ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಸರ್ಕಾರದೊಂದಿಗಿನ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ, ಮೌಲ್ಯಮಾಪನ ಬಹಿಷ್ಕಾರ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕಿಮ್ಮನೆ ರತ್ನಾಕರ್, ವೇತನ ತಾರತಮ್ಯ ವಿಷಯ ಎಲ್ಲಾ ಇಲಾಖೆಗಳಲ್ಲೂ ಇದೆ. ಪಿಯು ಪ್ರಾಧ್ಯಾಪಕರ ವೇತನ ತಾರತಮ್ಯವನ್ನು ಮಾತ್ರ ಬಗೆಹರಿಸಲು ಸಾಧ್ಯವಿಲ್ಲ. ಎಲ್ಲಾ 28 ಇಲಾಖೆಗಳ ವೇತನ ತಾರತಮ್ಯವನ್ನು ಬಗೆಹರಿಸಬೇಕಾಗುತ್ತದೆ. ವೇತನ ತಾರತಮ್ಯ ಬಗೆಹರಿಸಲು ಸಿಎಂ ಸಿದ್ದರಾಮಯ್ಯ 40 -50 ಕೋಟಿ ಕೊಡಲು ಸಿದ್ಧರಿದ್ದಾರೆ. ಸಭೆ ವಿಫಲವಾಗಿರುವುದು ಹಾಗೂ ಪ್ರಾಧ್ಯಾಪಕರ ಬೇಡಿಕೆ ಬಗ್ಗೆ ಮತ್ತೊಮ್ಮೆ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.   
ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮಾತನಾಡಿರುವ ಸಚಿವರು, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮಾ.21 ರಂದೇ ರಾಜೀನಾಮೆ ನೀಡಲು ಮುಂದಾಗಿದ್ದೆ. ಆದರೆ ವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಇನ್ನೂ ಹುದ್ದೆಯಲ್ಲಿ ಮುಂದುವರೆದಿದ್ದೇನೆ. ಏ.12 ರಂದು ಕೆಮಿಸ್ಟ್ರಿ ಪತ್ರಿಕೆ ಸೋರಿಕೆಯಾಗುವುದಿಲ್ಲ, ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT