ಪರೀಕ್ಷಾರ್ಥ ಸಂಚಾರದ ಚಿತ್ರ 
ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆವರೆಗಿನ ಸುರಂಗ ಮೆಟ್ರೊಗೆ ಗ್ರೀನ್ ಸಿಗ್ನಲ್

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ...

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಸೋಮವಾರ ಗ್ರೀನ್ ಸಿಗ್ನಲ್ ನೀಡಲಾಗಿದೆ. 
ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್‌ 25ರಂದು ಅರ್ಜಿ ಸಲ್ಲಿಸಿತ್ತು. ಪರಿಶೀಲನೆ ನಡೆಸಿದ ನಂತರ ಸುರಕ್ಷತಾ ಆಯುಕ್ತರು ಇಂದು ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
ಮೆಟ್ರೊ ಮಾರ್ಗಗಳಲ್ಲಿ ವಾಣಿಜ್ಯ ಸಂಚಾರ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೇರಿದ 2 ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ. ಆ ಎರಡು ಸಂಸ್ಥೆಗಳೆಂದರೆ ‘ರಿಸರ್ಚ್‌ ಡಿಸೈನ್ಸ್‌ ಅಂಡ್‌ ಸ್ಟಾಂಡರ್ಡ್‌್ಸ ಆರ್ಗನೈಸೇಷನ್‌’ (ಆರ್‌ಡಿಎಸ್‌ಒ) ಮತ್ತು ಮೆಟ್ರೊ ರೈಲು ಸುರಕ್ಷತಾ ಆಯುಕ್ತರ (ಎಂಸಿಆರ್‌ಎಸ್‌) ಕಚೇರಿ.
ಆರ್‌ಡಿಎಸ್‌ಒ ತಂತ್ರಜ್ಞರು ಪರಿಶೀಲಿಸಿ ಈಗಾಗಲೇ ಪ್ರಮಾಣಪತ್ರ ನೀಡಿದ್ದಾರೆ.  ಬೇರೆ ಬೇರೆ ವೇಗದಲ್ಲಿ ರೈಲು ಹೇಗೆ ಓಡಲಿದೆ, ಹಳಿಗಳ ಮೇಲೆ ಉಂಟಾಗುವ ಒತ್ತಡದ ಪರಿಣಾಮಗಳು– ಇವೇ ಮೊದಲಾದ ಅಂಶಗಳ ಬಗ್ಗೆ ಆರ್‌ಡಿಎಸ್‌ಒದ ತಂತ್ರಜ್ಞರು ಪರಿಶೀಲಿಸಿದ್ದರು. ಸುರಕ್ಷತಾ ಆಯುಕ್ತರು ಸುರಕ್ಷತೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಪರಿಶೀಲಿಸಿ ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT