ಅಗ್ನಿಗಾಹುತಿಯಾದ ಅಂಗಡಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿ ಅಗ್ನಿ ಅವಘಡ; ಎರಡು ಅಂಗಡಿಗಳು ಭಸ್ಮ

ಬೆಂಗಳೂರಿನ ಶಿವಾಜಿನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿದೆ..

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿದೆ.

ಶಿವಾಜಿನಗರದ ಲಾಲಾ ರಸ್ತೆಯಲ್ಲಿರುವ ಸೈನ್ ಬೋರ್ಡ್ ತಯಾರಿಕಾ ಅಂಗಡಿಯಲ್ಲಿ ನಿನ್ನೆ ತಡರಾತ್ರಿ ಸುಮಾರು 3.30ರ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಈ ವೇಳೆ  ಅಂಗಡಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿಯ ಕೆನ್ನಾಲಿಗೆ ತೀವ್ರಗೊಂಡಿದೆ. ಅಂಗಡಿಯಲ್ಲಿದ್ದ ಸೈನ್ ಬೋರ್ಡ್ ಗೆ ಬಳಕೆ ಮಾಡಲಾಗುವ ವಸ್ತುಗಳು ಸುಟ್ಟುಹೋಗಿದ್ದು,  ಅಂಗಡಿಯ ರೋಲಿಂಗ್ ಶೆಟರ್ ಕಿತ್ತು ಬಂದಿದೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರಾದರೂ, ಅಷ್ಟುಹೊತ್ತಿಗಾಗಲೇ ಬೆಂಕಿ ಕೆನ್ನಾಲಿಗೆ ಇಡೀ ಕಟ್ಟಡವನ್ನು  ವ್ಯಾಪಿಸಿತ್ತು. ಅದೃಷ್ಟವಶಾತ್ ವಾಣಿಜ್ಯ ಕಟ್ಟಡವಾದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇನ್ನು ಇದೇ ಸೈನ್ ಬೋರ್ಡ್ ಅಂಗಡಿಯ ಪಕ್ಕದಲ್ಲಿರುವ ಮೆಡಿಕಲ್ ಸ್ಟೋರ್ ಗೂ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ  ಮೌಲ್ಯದ ಔಷಧಿ ಸಾಮಗ್ರಿಗಳು ಅಗ್ನಿಗಾಹುತಿಯಾಗಿದೆ.  ಅಂತೆಯೇ ಪಕ್ಕದಲ್ಲಿದ್ದ ಕಾರು ಕೂಡ ಜಖಂಗೊಂಡಿದ್ದು, ಕಾರಿನ ಅರ್ಧಭಾಗ ಬೆಂಕಿಗಾಹುತಿಯಾಗಿದೆ. ಮೂಲಗಳ ಪ್ರಕಾರ ಅಗ್ನಿ ಅವಘಡ ಸಂಭವಿಸಿದ ಸೈನ್ ಬೋರ್ಡ್ ಅಂಗಡಿ ಮುನ್ನಾ  ಎಂಬುವವರಿಗೆ ಸೇರಿದ್ದಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಶಿವಾಜಿನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT