ಮರ್ಯಾದಾ ಹತ್ಯೆ 
ರಾಜ್ಯ

ಮೈಸೂರು: ಮಗಳಿಗೆ ವಿಷವುಣಿಸಿ ಕೊಂದ ತಂದೆ, ಅಣ್ಣನ ಬಂಧನ

ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ...

ಮೈಸೂರು: ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ ಮಾಡಿದ್ದ ಘಟನೆ ವರದಿಯಾಗಿತ್ತು.

ಇದೀಗ ಇಂತಹದೇ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದ 23 ವರ್ಷದ ಮಗಳಿಗೆ ಪೋಷಕರೇ ಮಾವಿನ ಜ್ಯೂಸಿನಲ್ಲಿ ವಿಷ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ನಂಜನಗೂಡಿನ ಚಂದ್ರವಾಡಿ ಗ್ರಾಮದಲ್ಲಿ ಮಧು ಕುಮಾರಿ ನಿಗೂಢವಾಗಿ ಸಾವನ್ನಪ್ಪಿದ್ದಳು. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆತ್ತವರು ಪೊಲೀಸರಿಗೂ ತಿಳಿಸದೆ ಮಗಳ ಅಂತ್ಯಸಂಸ್ಕಾರವನ್ನು ಆತುರದಲ್ಲಿ ಮಾಡಿ ಮುಗಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಮಧುವಿನ ತಂದೆ ಹಾಗೂ ಅಣ್ಣ ವಿಚಾರಣೆಗೊಳಪಡಿಸಿದಾಗ ತಮ್ಮ ಮಗಳು ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದು, ಮರ್ಯಾದೆಗೆ ಅಂಜಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಎಸ್ಪಿ ಅಭಿನವ್ ಖರೆ ಮಾಹಿತಿ ನೀಡಿದ್ದಾರೆ. ಸದ್ಯ ತಂದೆ ಹಾಗೂ ಅಣ್ಣ ಪೊಲೀಸರ ವಶದಲ್ಲಿದ್ದಾರೆ.

ಮಧು ಕುಮಾರಿ ಅದೇ ಊರಿನ ಕೆಳ ಜಾತಿಯ ಜಯರಾಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಪೋಷಕರು ಆಕೆಗೆ ಸಂಬಂಧಿ ಹುಡುಗನೊಂದಿಗೆ ವಿವಾಹ ನಿಶ್ಚಯ ಮಾಡಿ ಲಗ್ನ ಪತ್ರಿಕೆಯನ್ನು ಹಂಚುತ್ತಿದ್ದರು. ಆದರೆ, ತನಗೆ ಮದುವೆ ಬೇಡ ಎಂದು ನಿರಾಕರಿಸುತ್ತಿದ್ದ ಮಗಳನ್ನು ಕಡೆಗೆ ವಿಷವುಣಿಸಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT