ಮರ್ಯಾದಾ ಹತ್ಯೆ 
ರಾಜ್ಯ

ಮೈಸೂರು: ಮಗಳಿಗೆ ವಿಷವುಣಿಸಿ ಕೊಂದ ತಂದೆ, ಅಣ್ಣನ ಬಂಧನ

ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ...

ಮೈಸೂರು: ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ ಮಾಡಿದ್ದ ಘಟನೆ ವರದಿಯಾಗಿತ್ತು.

ಇದೀಗ ಇಂತಹದೇ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದ 23 ವರ್ಷದ ಮಗಳಿಗೆ ಪೋಷಕರೇ ಮಾವಿನ ಜ್ಯೂಸಿನಲ್ಲಿ ವಿಷ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ನಂಜನಗೂಡಿನ ಚಂದ್ರವಾಡಿ ಗ್ರಾಮದಲ್ಲಿ ಮಧು ಕುಮಾರಿ ನಿಗೂಢವಾಗಿ ಸಾವನ್ನಪ್ಪಿದ್ದಳು. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆತ್ತವರು ಪೊಲೀಸರಿಗೂ ತಿಳಿಸದೆ ಮಗಳ ಅಂತ್ಯಸಂಸ್ಕಾರವನ್ನು ಆತುರದಲ್ಲಿ ಮಾಡಿ ಮುಗಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಮಧುವಿನ ತಂದೆ ಹಾಗೂ ಅಣ್ಣ ವಿಚಾರಣೆಗೊಳಪಡಿಸಿದಾಗ ತಮ್ಮ ಮಗಳು ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದು, ಮರ್ಯಾದೆಗೆ ಅಂಜಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಎಸ್ಪಿ ಅಭಿನವ್ ಖರೆ ಮಾಹಿತಿ ನೀಡಿದ್ದಾರೆ. ಸದ್ಯ ತಂದೆ ಹಾಗೂ ಅಣ್ಣ ಪೊಲೀಸರ ವಶದಲ್ಲಿದ್ದಾರೆ.

ಮಧು ಕುಮಾರಿ ಅದೇ ಊರಿನ ಕೆಳ ಜಾತಿಯ ಜಯರಾಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಪೋಷಕರು ಆಕೆಗೆ ಸಂಬಂಧಿ ಹುಡುಗನೊಂದಿಗೆ ವಿವಾಹ ನಿಶ್ಚಯ ಮಾಡಿ ಲಗ್ನ ಪತ್ರಿಕೆಯನ್ನು ಹಂಚುತ್ತಿದ್ದರು. ಆದರೆ, ತನಗೆ ಮದುವೆ ಬೇಡ ಎಂದು ನಿರಾಕರಿಸುತ್ತಿದ್ದ ಮಗಳನ್ನು ಕಡೆಗೆ ವಿಷವುಣಿಸಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!