ಮರ್ಯಾದಾ ಹತ್ಯೆ 
ರಾಜ್ಯ

ಮೈಸೂರು: ಮಗಳಿಗೆ ವಿಷವುಣಿಸಿ ಕೊಂದ ತಂದೆ, ಅಣ್ಣನ ಬಂಧನ

ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ...

ಮೈಸೂರು: ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ ಮಾಡಿದ್ದ ಘಟನೆ ವರದಿಯಾಗಿತ್ತು.

ಇದೀಗ ಇಂತಹದೇ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದ 23 ವರ್ಷದ ಮಗಳಿಗೆ ಪೋಷಕರೇ ಮಾವಿನ ಜ್ಯೂಸಿನಲ್ಲಿ ವಿಷ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ನಂಜನಗೂಡಿನ ಚಂದ್ರವಾಡಿ ಗ್ರಾಮದಲ್ಲಿ ಮಧು ಕುಮಾರಿ ನಿಗೂಢವಾಗಿ ಸಾವನ್ನಪ್ಪಿದ್ದಳು. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆತ್ತವರು ಪೊಲೀಸರಿಗೂ ತಿಳಿಸದೆ ಮಗಳ ಅಂತ್ಯಸಂಸ್ಕಾರವನ್ನು ಆತುರದಲ್ಲಿ ಮಾಡಿ ಮುಗಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಮಧುವಿನ ತಂದೆ ಹಾಗೂ ಅಣ್ಣ ವಿಚಾರಣೆಗೊಳಪಡಿಸಿದಾಗ ತಮ್ಮ ಮಗಳು ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದು, ಮರ್ಯಾದೆಗೆ ಅಂಜಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಎಸ್ಪಿ ಅಭಿನವ್ ಖರೆ ಮಾಹಿತಿ ನೀಡಿದ್ದಾರೆ. ಸದ್ಯ ತಂದೆ ಹಾಗೂ ಅಣ್ಣ ಪೊಲೀಸರ ವಶದಲ್ಲಿದ್ದಾರೆ.

ಮಧು ಕುಮಾರಿ ಅದೇ ಊರಿನ ಕೆಳ ಜಾತಿಯ ಜಯರಾಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಪೋಷಕರು ಆಕೆಗೆ ಸಂಬಂಧಿ ಹುಡುಗನೊಂದಿಗೆ ವಿವಾಹ ನಿಶ್ಚಯ ಮಾಡಿ ಲಗ್ನ ಪತ್ರಿಕೆಯನ್ನು ಹಂಚುತ್ತಿದ್ದರು. ಆದರೆ, ತನಗೆ ಮದುವೆ ಬೇಡ ಎಂದು ನಿರಾಕರಿಸುತ್ತಿದ್ದ ಮಗಳನ್ನು ಕಡೆಗೆ ವಿಷವುಣಿಸಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT