ಮರ್ಯಾದಾ ಹತ್ಯೆ 
ರಾಜ್ಯ

ಮೈಸೂರು: ಮಗಳಿಗೆ ವಿಷವುಣಿಸಿ ಕೊಂದ ತಂದೆ, ಅಣ್ಣನ ಬಂಧನ

ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ...

ಮೈಸೂರು: ಇತ್ತೀಚೆಗೆ ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳ ಸರಣಿ ಹೆಚ್ಚುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮಂಡ್ಯದಲ್ಲಿ ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ಪೋಷಕರು ಹತ್ಯೆ ಮಾಡಿದ್ದ ಘಟನೆ ವರದಿಯಾಗಿತ್ತು.

ಇದೀಗ ಇಂತಹದೇ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದ 23 ವರ್ಷದ ಮಗಳಿಗೆ ಪೋಷಕರೇ ಮಾವಿನ ಜ್ಯೂಸಿನಲ್ಲಿ ವಿಷ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ನಂಜನಗೂಡಿನ ಚಂದ್ರವಾಡಿ ಗ್ರಾಮದಲ್ಲಿ ಮಧು ಕುಮಾರಿ ನಿಗೂಢವಾಗಿ ಸಾವನ್ನಪ್ಪಿದ್ದಳು. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆತ್ತವರು ಪೊಲೀಸರಿಗೂ ತಿಳಿಸದೆ ಮಗಳ ಅಂತ್ಯಸಂಸ್ಕಾರವನ್ನು ಆತುರದಲ್ಲಿ ಮಾಡಿ ಮುಗಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಮಧುವಿನ ತಂದೆ ಹಾಗೂ ಅಣ್ಣ ವಿಚಾರಣೆಗೊಳಪಡಿಸಿದಾಗ ತಮ್ಮ ಮಗಳು ಕೆಳ ಜಾತಿ ಯುವಕನನ್ನು ಪ್ರೀತಿಸುತ್ತಿದ್ದು, ಮರ್ಯಾದೆಗೆ ಅಂಜಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಎಸ್ಪಿ ಅಭಿನವ್ ಖರೆ ಮಾಹಿತಿ ನೀಡಿದ್ದಾರೆ. ಸದ್ಯ ತಂದೆ ಹಾಗೂ ಅಣ್ಣ ಪೊಲೀಸರ ವಶದಲ್ಲಿದ್ದಾರೆ.

ಮಧು ಕುಮಾರಿ ಅದೇ ಊರಿನ ಕೆಳ ಜಾತಿಯ ಜಯರಾಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಪೋಷಕರು ಆಕೆಗೆ ಸಂಬಂಧಿ ಹುಡುಗನೊಂದಿಗೆ ವಿವಾಹ ನಿಶ್ಚಯ ಮಾಡಿ ಲಗ್ನ ಪತ್ರಿಕೆಯನ್ನು ಹಂಚುತ್ತಿದ್ದರು. ಆದರೆ, ತನಗೆ ಮದುವೆ ಬೇಡ ಎಂದು ನಿರಾಕರಿಸುತ್ತಿದ್ದ ಮಗಳನ್ನು ಕಡೆಗೆ ವಿಷವುಣಿಸಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT