ಸಾಂದರ್ಭಿಕ ಚಿತ್ರ 
ರಾಜ್ಯ

ಕೆಂಡದಂತಹ ಬಿಸಿಲಿಗೆ ರಾಜ್ಯದ ಜನ ತತ್ತರ

ರಾಜ್ಯದ ಬಿಸಿಲಿನ ಝಳ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಭಾಗದ ಜನರು ಬಿಸಿಲ ಬೇಗೆಗೆ ತತ್ತರಿಸಿ...

ಬೆಂಗಳೂರು: ರಾಜ್ಯದ ಬಿಸಿಲಿನ ಝಳ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಭಾಗದ ಜನರು ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದಾರೆ. 
ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಹಲವು ಜಿಲ್ಲೆಯಲ್ಲಿ ಕೆಂಡದಂಥ ಬಿಸಿಲಿಗೆ ಜನರು ಬಸವಳಿದಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣತೆ ಏರಿಕೆಯಾಗಿದೆ. ರಾಯಚೂರಿನಲ್ಲಿ 43 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಇದ್ದು, ಬೆಂಗಳೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಇದೆ.
ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಉಷ್ಣತೆ ಹೆಚ್ಚಾಗಿದ್ದು, ಇನ್ನು ಕೆಲವು ದಿನಗಳ ಕಾಲ ಇದೇ ಉಷ್ಣಾಂಶ ಮುಂದುವರೆಯಲಿದೆ ಎಂದು ಹೇಳಿರುವ ತಜ್ಞರು, ವಾಹನದ ಸಂಖ್ಯೆ ಹೆಚ್ಚಳ, ಕಟ್ಟಡಗಳ ನಿರ್ಮಾಣ, ವಾಯು ಮಾಲಿನ್ಯದಿಂದಾಗಿ ಈ ಬಾರಿ ಬಿಸಿಲು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. 
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಇರುತ್ತದೆ. ಆದರೆ, ಈ ಬಾರಿ 40 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಕಂಡು ಬಂದಿದೆ. 
ಹೆಚ್ಚು ಉಷ್ಣಾಂಶ ಇರುವ ಹಿನ್ನಲೆಯಲ್ಲಿ ರಾಯಚೂರ್, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಸರ್ಕಾರಿ ಕಚೇರಿಗಳು ಬೆಳಿಗ್ಗೆ 8 ರಿಂದ 1 ರವರೆಗೆ ಕಾರ್ಯನಿರ್ಹವಹಿಸುತ್ತವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT