ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಅಪಘಾತದಲ್ಲಿ ಪಿಯು ವಿದ್ಯಾರ್ಥಿ ದುರ್ಮರಣ

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಮೃತ ಪಟ್ಟು ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ...

ಬೆಂಗಳೂರು:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಮೃತ ಪಟ್ಟು ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಗೇಟ್ ಬಳಿ ನಡೆದಿದೆ.

ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿ ಆರ್ .ಟಿ ನಗರದ ನಿವಾಸಿ ಅರವಿಂದ್ ಮುರುಳೀದರನ್ ಮೃತ ದುರ್ದೈವಿ. ಈತ ಇಂದು ಬೆಳಗ್ಗೆ ತನ್ನ ಬೈಕ್ ನಲ್ಲಿ ಕಾಲೇಜಿಗೆ ತನ್ನ ಹೋಂಡಾ ಆಕ್ಟೀವಾ ದಲ್ಲಿ ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರೊಂದು ಅರವಿಂದನ ಆಕ್ಟೀವಾ ಮತ್ತು ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಅರವಿಂದ್ ಮುರುಳಿಧರ್ ಮತ್ತು  ಇನ್ನೊಬ್ಬ ಬೈಕ್ ಸವಾರ ವಿಜಯ್ ಹೀರೆಮಠ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮದ್ಯದಲ್ಲೇ ಅರವಿಂದ್ ಮೃತ ಪಟ್ಟಿದ್ದಾನೆ. ಇನ್ನು ತೀವ್ರ ಗಾಯಹಗೊಂಡಿರುವ ವಿಜಯ್ ಹೀರೆಮಠ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಮಾರುತಿ ಆಲ್ಟೋ ಕಾರು ಚಲಾಯಿಸುತ್ತಿದ್ದ ಅನಿತಾ ಸೇನ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಖಾಸಗಿ ಕಂಪನಿಯೊಂದರಲ್ಲಿ ಗ್ರಾಫಿಕ್ ಡಿಸೈನರ್ ಆಗಿರುವ ಅನಿತಾ ಸೇನ್  ಲರ್ನಿಂಗ್ ಲೈಸೆನ್ಸ್ ಹೊಂದಿದ್ದಾರೆ. ಅನಿತಾ ಸೇನ್ ವಿರುದ್ಧ ಹೆಬ್ಬಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT