ಸಾಂದರ್ಭಿಕ ಚಿತ್ರ 
ರಾಜ್ಯ

ಸಿಎಂ ವಿರುದ್ಧ ಪುತ್ರ ವ್ಯಾಮೋಹ ಆರೋಪ: ಲ್ಯಾಬ್ ಗುತ್ತಿಗೆ ರದ್ದು ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರು ಪಾಲುದಾರಿಕೆಯ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ಸ್ ಇಂಡಿಯಾ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರ ಪಾಲುದಾರಿಕೆಯ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ಸ್ ಇಂಡಿಯಾ ಪ್ರೈ.ಲಿ. ಸಂಸ್ಥೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ (ಪಿಎಂಎಸ್ ಎಸ್ ವೈ) ಆಸ್ಪತ್ರೆಯಲ್ಲಿ ಖಾಸಗಿ ಲ್ಯಾಬ್ ತೆರೆಯಲು ನೀಡಿರುವ ಟೆಂಡರ್ ನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 
ದುಬಾರಿ ವಾಚ್ ಪ್ರಕರಣ ವಿವಾದದ ಬೆನ್ನಲ್ಲೆ, ಪುತ್ರನ ಕಂಪನಿಗೆ ಲ್ಯಾಬ್ ಟೆಂಡರ್ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪುತ್ರ ವ್ಯಾಮೋಹದ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿಗಳು ಪ್ರಯೋಗಾಲಯ ತೆರೆಯಲು ನೀಡಿರುವ ಗುತ್ತಿಗೆಯನ್ನು ರದ್ದು ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮ್ಯಾಟ್ರಿಕ್ಸ್ ಇಮೇಂಜಿಂಗ್ ಸಲ್ಯೂಷನ್ಸ್ ಕಚೇರಿ ಹೊಂದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಲ್ಯಾಬ್ ಆರಂಭಿಸಲು ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಆದರೆ ಸಿಎಂ ಹಾಗೂ ಸಚಿವ ಸಂಪುಟದ ಸದಸ್ಯರ ಕುಟುಂಬ ಸರ್ಕಾರದೊಂದಿಗೆ ಯಾವುದೇ ಉದ್ಯಮದಲ್ಲಿ ಪಾಲ್ಗೊಳ್ಳುವುದಾಗಲಿ ಅಥವಾ ಸರ್ಕಾರಕ್ಕೆ ಯಾವುದೇ ಸೇವೆ ಒದಗಿಸುವಂತಿಲ್ಲ ಎಂಬ ನೀತಿ ಸಂಹಿತೆ ಇದೆ. 
ಆದರೆ ನಿಯಮ ಮೀರಿ ಸಿಎಂ ಪುತ್ರನ ಸಂಸ್ಥೆಗೆ ಡಯಾಗ್ನೋಸ್ಟಿಕ್ ಘಟಕ ತೆರೆಯಲು ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ ಯತೀಂದ್ರ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ನಿನ್ನೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT