ಪೌರಕಾರ್ಮಿಕ ದಂಪತಿಯ ಪಾದ ಪೂಜೆ ನಡೆಸಿದ ವಚನಾನಂದ ಸ್ವಾಮೀಜಿ 
ರಾಜ್ಯ

ದಲಿತರ ಪಾದ ಪೂಜೆ ಮಾಡಿದ ವಚನಾನಂದ ಸ್ವಾಮೀಜಿ

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ಶ್ವಾಸಗುರು ಖ್ಯಾತಿಯ ವಚನಾನಂದ...

ದಾವಣಗೆರೆ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ಶ್ವಾಸಗುರು ಖ್ಯಾತಿಯ ವಚನಾನಂದ ಸ್ವಾಮೀಜಿ ಅವರು ದಲಿತರ ಪಾದ ಪೂಜೆ ಮಾಡಿದ್ದಾರೆ. 
ದಾವಣಗೆರೆಯ ಗಾಂಧಿನಗರದ ದಲಿತರ ಕೇರಿಯಲ್ಲಿ ಗುರುವಾರ ವಚನಾನಂದ ಸ್ವಾಮೀಜಿ ಪೌರಕಾರ್ಮಿಕರಾದ ದಾಸಪ್ಪ ಮತ್ತು ಕಮಲಮ್ಮನವರ ಪಾದ ತೊಳೆದು ಪೂಜಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಪಾದ ಪೂಜೆ ಮಾಡಿದ್ದಾರೆ. 
ದಾಸಪ್ಪ ಮತ್ತು ಕಮಲಮ್ಮನವರ ಪಾದ ತೊಳೆದ ಸ್ವಾಮಿಜಿ, ವಿಭೂತಿ, ಹೂ ಇಟ್ಟು ಬಸವಣ್ಣನ ವಚನಗಳನ್ನು ಹೇಳಿದ್ದಾರೆ. ನಂತರ ತಮ್ಮ ತಲೆಯನ್ನು ಅವರ ಪಾದದ ಮೇಲಿಟ್ಟು ಆಶೀರ್ವಾದ ಪಡೆದು, ದಂಪತಿಗಳಿಗೆ ಶಾಲು, ಮೈಸೂರು ಪೇಟಾ ಮತ್ತು ಹೂಗುಚ್ಚ ನೀಡಿ ಸನ್ಮಾನಿಸಿದ್ದಾರೆ. 
ನಮಗೆ ದೇವಸ್ಥಾನದ ಒಳಕ್ಕೂ ಪ್ರವೇಶ ನೀಡುತ್ತಿರಲಿಲ್ಲ. ಆದರೆ, ಇಂದು ಸ್ವಾಮಿಜಿಯೇ ನಮ್ಮ ಮನೆಗೆ ಬಂದು ಪಾದ ಪೂಜೆ ಮಾಡಿದ್ದಾರೆ. ಇದು ಕನಸೋ ನನಸೋ ಗೊತ್ತಿಲ್ಲ ಎಂದು ಹೇಳಿ ದಪಂತಿಗಳು ಭಾವುಕರಾಗಿದ್ದಾರೆ. 
ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆ ಅಸ್ತಿತ್ವದಲ್ಲಿ ಇಲ್ಲ. ಜಾತಿ ಧರ್ಮ ಮಾಡಿಕೊಂಡಿರುವುದು ಮನುಷ್ಯರೇ. ಅವರು ನಮ್ಮವರಲ್ಲಿ ಒಬ್ಬರು ಎಂದು ಪರಿಗಣಿಸಬೇಕು. ದಲಿತರ ಶೋಷಣೆ ನಿಲ್ಲಬೇಕು ಎಂಬುದು ಅಂಬೇಡ್ಕರ್ ಅವರ ಕನಸಾಗಿತ್ತು. ಇದರ ಬಗ್ಗೆ ಜಾಗೃತಿ ಮೂಡಿಸಲು ದಲಿತರ ಕೇರಿಯಲ್ಲಿ ಪೌರಕಾರ್ಮಿಕರ ಪಾದ ಪೂಜಿಸಲಾಯಿತು ಎಂದು ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT