ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣವಾಗಿರುವ ಮೆಟ್ರೋ ರೈಲು ನಿಲ್ದಾಣಕ್ಕೆ ಡಾ. ಬಿಆರ್ ಅಂಬೇಡ್ಕರ್ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಅಂಬೇಡ್ಕರ್ ಅವರು 125ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ವಿಧಾನಸೌಧ ಮುಂಭಾಗದಲ್ಲಿರುವ ಮೆಟ್ರೋ ರೈಲು ನಿಲ್ದಾಣ, ಯಶವಂತಪುರ ರೈಲು ನಿಲ್ದಾಣ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಉದ್ದೇಶಿತ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ ಮಾದರಿ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರು ನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.
ಯಶವಂತಪುರ ರೈಲು ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡುವಂತೆ ಕೇಂದ್ರ ರೈಲ್ವೆ ಇಲಾಖೆ ಶಿಫಾರಸು ಮಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.