ಬಿ.ಎಸ್. ಯಡಿಯೂರಪ್ಪ 
ರಾಜ್ಯ

ಯೂ ಟರ್ನ್ ಹೊಡೆದ ಬಿಎಸ್'ವೈ: ನಿರಾಣಿ ನೀಡಿದ್ದ ಕಾರು ವಾಪಸ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ದುಬಾರಿ ಕಾರೊಂದನ್ನು ಉಡುಗೊರೆಯಾಗಿ ಪಡೆದು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಯೂ ಟರ್ನ್ ಹೊಡೆದಿದ್ದು, ಮುರುಗೇಶ್ ನಿರಾಣಿ ನೀಡಿದ್ದ ದುಬಾರಿ ಬೆಲೆಯ...

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ದುಬಾರಿ ಕಾರೊಂದನ್ನು ಉಡುಗೊರೆಯಾಗಿ ಪಡೆದು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಯೂ ಟರ್ನ್ ಹೊಡೆದಿದ್ದು, ಮುರುಗೇಶ್ ನಿರಾಣಿ ನೀಡಿದ್ದ ದುಬಾರಿ ಬೆಲೆಯ ಕಾರನ್ನು ಹಿಂತಿರುಗಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, 40 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದೇನೆ. ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಸಂಚರಿಸಿದ್ದೇನೆ. ಇನ್ನು ಬರಪೀಡಿತ ರಾಜ್ಯಗಳ ಪ್ರವಾಸವನ್ನು ಅದೇ ರೀತಿಯಲ್ಲಿ ಮಾಡುತ್ತೇನೆ. ಇದರಿಂದ ನನಗಾವುದೇ ಸಮಸ್ಯೆಯಿಲ್ಲ. ನಿರಾಣಿ ಅವರು ನೀಡಿದ್ದ ಕಾರನ್ನು ವಾಪಸ್ ನೀಡಿದ್ದೇನೆಂದು ಹೇಳಿದ್ದಾರೆ.

ಇದೇ ವೇಳೆ ಬರ ಪೀಡಿತ ರಾಜ್ಯಗಳಿಗೆ ಇದೇ ಕಾರಿನಲ್ಲೇ ಹೋಗಬೇಕೆಂದು ಯಾವ ಕಾರಣಕ್ಕೆ ತೀರ್ಮಾನ ಕೈಗೊಂಡಿದ್ದಿರಿ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಈ ಎರಡೂ ವಿಚಾರವನ್ನು ಹೋಲಿಕೆ ಮಾಡಬಾರದು ಎಂದು ಹೇಳಿದ್ದಾರೆ.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಅವರು ಆಯ್ಕೆಯಾಗುತ್ತಿದ್ದಂತೆ ಸಚಿವ ಮುರುಗೇಶ್ ನಿರಾಣಿ ಅವರು ರು.1 ಕೋಟಿ ವೆಚ್ಚದ ದುಬಾರಿ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ನಿರಾಣಿ ಅವರು ನೀಡಿದ್ದ ದುರಾಬಿ ಕಾರನ್ನು ಪಡೆದಿದ್ದ ಬಿಎಸ್ ವೈ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರು ಟೀಕೆಗಳನ್ನು ವ್ಯಕ್ತಪಡಿಸಿದ್ದರು.

ತಮ್ಮ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಯಡಿಯೂರಪ್ಪ ಅವರು ನಿರಾಣಿಯವರಿಗೆ ಕಾರನ್ನು ಹಿಂತಿರುಗಿ ನೀಡಿದ್ದು, ರೈಲಿನ ಮೂಲಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಪ್ರಕಟಣೆಯೊಂದರಲ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

SCROLL FOR NEXT