ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ) 
ರಾಜ್ಯ

ಬರ ಪರಿಹಾರಕ್ಕೆ ಬಿಜೆಪಿ ಶಾಸಕ, ಸಂಸದರ ತಿಂಗಳ ವೇತನ: ಬಿಎಸ್ ವೈ

: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಸಂಬಂಧ ತಿಂಗಳ ವೇತನವನ್ನು ಬರಿ ಪರಿಹಾರ ನಿಧಿಗೆ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಸಂಬಂಧ ತಿಂಗಳ ವೇತನವನ್ನು ಬರಿ ಪರಿಹಾರ ನಿಧಿಗೆ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.

ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು, ರಾಜ್ಯಾದಾದ್ಯಂತ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಜನರ ಸಂಕಷ್ಟಕ್ಕೆ ನೆರವಾಗುವ ಸಲುವಾಗಿ ಒಂದು ತಿಂಗಳ ವೇತನವನ್ನು ಬರಿ ಪರಿಹಾರ ನಿಧಿ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಎದುರಾಗಿರುವ ಬರ ಹಿನ್ನೆಲೆಯಲ್ಲಿ ಏ.27 ರಿಂದ ಐದು ದಿನಗಳ ಕಾಲ ಯಡಿಯೂರಪ್ಪ ಅವರು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬೀದರ್ ನಿಂದ ಪ್ರವಾಸ ಆರಂಭಿಸಲಿರುವ ಯಡಿಯೂರಪ್ಪ ಅವರು ನಂತರ ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಮುಂತಾದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT