ಸಾಂದರ್ಭಿಕ ಚಿತ್ರ 
ರಾಜ್ಯ

ಬರ ಪ್ರವಾಸದ ಬಗ್ಗೆ ಕ್ಯಾರೆ ಅನ್ನದ ರಾಜ್ಯ ಸಚಿವರು

ಡಿತ ಜಿಲ್ಲೆಗಳ ಅಧ್ಯಯನ ಮತ್ತು ಬರ ನಿರ್ವಹಣೆ ಕಾರ್ಯಕ್ರಮಗಳ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮೈಸೂರು: ಬರ ಪೀಡಿತ ಜಿಲ್ಲೆಗಳ ಅಧ್ಯಯನ ಮತ್ತು ಬರ ನಿರ್ವಹಣೆ ಕಾರ್ಯಕ್ರಮಗಳ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆಯಿಂದ ಬರ ಪ್ರವಾಸ ಆರಂಭಿಸಿದ್ದಾರೆ. ಆದರೆ, ಸಚಿವರು ಮಾತ್ರ ಇನ್ನು ಪ್ರವಾಸ ಕೈಗೊಳ್ಳದೇ ಇತರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. 
ಬರ ಪರಿಶೀಲನೆ ಪರಿಸ್ಥಿತಿ ಬಗ್ಗೆ ಸಚಿವರಗಳ ತಂಡ ಇನ್ನು ಪ್ರವಾಸಕೈಗೊಳ್ಳದೇ ಇರುವುದು ರೈತರಲ್ಲಿ ಬೇಸರ ತಂದಿದೆ. ರಾಜ್ಯದ ಮುಖ್ಯಮಂತ್ರಿಗಳೇ ಬರ ಪ್ರವಾಸ ಆರಂಭಿಸಿದ್ದರೂ, ಸಚಿವರು ಮಾತ್ರ ಇತರೆ ಕಾರ್ಯಕ್ರಮಗಳಲ್ಲಿ ತೊಡಗಿರುವುದು ಬರ ಪರಿಸ್ಥಿತಿ ಬಗ್ಗೆ ಅವರ ಆಸಕ್ತಿ ಎಷ್ಟಿದೆ ಎಂದು ತೋರುತ್ತದೆ ಎಂದು ಹೇಳಲಾಗುತ್ತಿದೆ. 
ರಾಜ್ಯ ಬರ ಪೀಡಿತ ಜಿಲ್ಲೆಗಳ ಅಧ್ಯಯನ ಮತ್ತು ಬರ ನಿರ್ವಹಣೆ ಕಾರ್ಯಕ್ರಮಗಳ ಪರಿಶೀಲನೆಗೆ 16 ಸಚಿವರನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಏಪ್ರಿಲ್ 15ರಿಂದ ಈ ಸಚಿವರ ತಂಡ ಬರ ಪ್ರವಾಸ ಕೈಗೊಳ್ಳಬೇಕಿತ್ತು. 
ಕಾಂಗ್ರೆಸ್ ಆಡಳಿತತದಲ್ಲಿ 2015ರಲ್ಲಿ 1,200 ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಗಾಗಿ, ರೈತರ ಸಮಸ್ಯೆ ಮತ್ತು ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಬಿಜೆಪಿ ಬರ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಕೂಡ ಬರ ಪ್ರವಾಸ ಕೈಗೊಳ್ಳುವುದಾಗಿ ಹೇಳಿತ್ತು. 
ಆದರೆ, ಪ್ರಸ್ತುತ ರಾಜ್ಯ ಸಚಿವರು ತಮ್ಮದೇ ಆದ ಇತರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಏಪ್ರಿಲ್ 22ರನಂತರ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT