ಮಾಜಿ ಲೋಕಾಯುಕ್ತ ನ್ಯಾ.ವೈ ಭಾಸ್ಕರ ರಾವ್ 
ರಾಜ್ಯ

ನಿವೃತ್ತಿ ಸೌಲಭ್ಯ ಕೋರಿ ಪತ್ರ ಬರೆದ ಮಾಜಿ ಲೋಕಾಯುಕ್ತ ವೈ ಭಾಸ್ಕರ ರಾವ್

ನಿವೃತ್ತಿ ನಂತರ ನೀಡುವ ಸೌಲಭ್ಯಗಳನ್ನು ಕೋರಿ ಮಾಜಿ ಲೋಕಾಯುಕ್ತ ವೈ ಭಾಸ್ಕರ ರಾವ್ ಅವರು ಲೋಕಾಯುಕ್ತ ಉಸ್ತುವಾರಿ ರಿಜಿಸ್ಟ್ರಾರ್ ಗೆ...

ಬೆಂಗಳೂರು: ನಿವೃತ್ತಿ ನಂತರ ನೀಡುವ ಸೌಲಭ್ಯಗಳನ್ನು ಕೋರಿ ಮಾಜಿ ಲೋಕಾಯುಕ್ತ ವೈ ಭಾಸ್ಕರ ರಾವ್ ಅವರು ಲೋಕಾಯುಕ್ತ ಉಸ್ತುವಾರಿ ರಿಜಿಸ್ಟ್ರಾರ್ ಗೆ ಪತ್ರ ಬರೆದಿದ್ದಾರೆ. 
ನಿವೃತ್ತಿಯ ನಂತರದ ಸವಲತ್ತುಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿ ನ್ಯಾ.ವೈ ಭಾಸ್ಕರ ರಾವ್ ಅವರು ಏಪ್ರಿಲ್ 1 ರಂದು ಲೋಕಾಯುಕ್ತ ಉಸ್ತುವಾರಿ ರಿಜಿಸ್ಟ್ರಾರ್ ಗೆ ಪತ್ರ ಬರೆದಿದ್ದಾರೆ. 
ಕರ್ನಾಟಕ ಲೋಕಾಯ್ಕುತ ಕಾಯ್ದೆ 6(1) ಪ್ರಕಾರ ಪಿಂಚಣಿ, ತುಟ್ಟಿಭತ್ಯೆ ಮಾತ್ರವಲ್ಲದೆ, ಭಾರತದ ಮುಖ್ಯ ನ್ಯಾಯಾಮೂರ್ತಿಗೆ ಅನ್ವಯವಾಗುವ ಎಲ್ಲಾ ನಿಯಮಗಳು ಅನ್ವಯಾಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಪತ್ರವನ್ನು ರಿಜಿಸ್ಟ್ರಾರ್ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಕೆಗೆ ಕಳುಹಿಸಿದ್ದಾರೆ. 
2013 ಫೆಬ್ರವರಿ 14ರಂದು ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಭಾಸ್ಕರ್ ರಾವ್ ಅವರು ಎರಡು ವರ್ಷ 10 ತಿಂಗಳು ಸೇವೆ ಸಲ್ಲಿಸಿ, 2015 ಡಿಸೆಂಬರ್ 7ರಂದು ಲೋಕಾಯುಕ್ತ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಪುತ್ರ ಅಶ್ವಿನ್ ರಾವ್ ಭಾಗಿಯಾಗಿದ್ದ ಹಿನ್ನಲೆಯಲ್ಲಿ ಅವರು ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT