ಸಾಂದರ್ಭಿಕ ಚಿತ್ರ 
ರಾಜ್ಯ

ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ದಂಪತಿಗಳ ನಡುವೆ ಜಗಳ: ಪತ್ನಿ ಆತ್ಮಹತ್ಯೆ

ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ಆರಂಭವಾದ ದಂಪತಿಗಳ ನಡುವಿನ ಜಗಳ ಕೊನೆಗೆ ಪತ್ನಿ ಆತ್ಮಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆಯೊಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಂಗಳೂರು: ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ಆರಂಭವಾದ ದಂಪತಿಗಳ ನಡುವಿನ ಜಗಳ ಕೊನೆಗೆ ಪತ್ನಿ ಆತ್ಮಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆಯೊಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕವಿತಾ ಅಲಿಯಾಸ್ ಆಯೆಷಾ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಭಾನುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ಅಯುಬ್ ಮಗು ಅಳುತ್ತಿರುವುದನ್ನು ನೋಡಿದ್ದಾನೆ. ಈ ವೇಳೆ ಮಗುವಿಗೆ ಹಾಲು ಕುಡಿಸಿ ಸಮಾಧಾನ ಪಡಿಸುವಂತೆ ಗದರಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ನಂತರ ಮಗುವನ್ನು ಎತ್ತಿಕೊಂಡ ಅಯುಬ್ ಮನೆಯಿಂದ ಹೊರ ಹೋಗಿದ್ದಾನೆ. ಪತಿಯ ಮಾತಿನಿಂದ ನೊಂದಿದ್ದ ಅಯೆಷಾ ನಂತರ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ.

10 ನಿಮಿಷದ ನಂತರ ಅಯುಬ್ ಮನೆಗೆ ಬಂದಿದ್ದಾನೆ. ಈ ವೇಳೆ ಅಯೆಷಾಳನ್ನು ಕಂಡು ಗಾಬರಿಯಿಂದ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾನೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಆಯೆಷಾ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT