ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರಿ ಕಾಮಗಾರಿಗಳಲ್ಲಿ ಶೇ.24ರಷ್ಟು ಎಸ್‌ಸಿ/ಎಸ್‌ಟಿಗೆ ಮೀಸಲು

ಪರಿಶಿಷ್ಟ ಜಾತಿ(ಎಸ್ ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ ಟಿ)ಗಳಿಗೆ ರು.50 ಲಕ್ಷಕ್ಕಿಂತ ಕಡಿಮೆ ಅಂದಾಜು ವೆಚ್ಚದ ಸರ್ಕಾರಿ ಕಾಮಗಾರಿಗಳ...

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್ ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ ಟಿ)ಗಳಿಗೆ ರು.50 ಲಕ್ಷಕ್ಕಿಂತ ಕಡಿಮೆ ಅಂದಾಜು ವೆಚ್ಚದ ಸರ್ಕಾರಿ ಕಾಮಗಾರಿಗಳ ಟೆಂಡರ್ ಗಳ್ಲಿ ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ಎಸ್ ಸಿಗೆ ಶೇ.17.15ರಷ್ಟು ಹಾಗೂ ಎಸ್ ಟಿಗೆ ಶೇ.6.85ರಷ್ಟು ಮೀಸಲಾತಿಯನ್ನು ಸರ್ಕಾರಿ ಟೆಂಡರ್ ಗಳಲ್ಲಿ ನಿಗದಿಪಡಿಸಲಾಗಿದೆಯೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಟಿಬಿ ಜಯಚಂದ್ರ ಬುಧವಾರ ತಿಳಿಸಿದ್ದಾರೆ. 
ಸಚಿವ ಸಂಪುಟದ ಸಭೆ ಬಳಿಕ ಮಾತನಾಡಿದ ಅವರು, ರು.50 ಲಕ್ಷಕ್ಕಿಂತ ಕಡಿಮೆ ಕಾಮಗಾರಿ ಅಥವಾ ಇನ್ನಾವುದೇ ವ್ಯವಹಾರದ ಟೆಂಡರ್ ಗಳನ್ನು ನೀಡಲು ಅನುಕೂಲವಾಗುವಂತೆ ಕರ್ನಾಟಕ ಪಾರದರ್ಶಕ ಕಾಯ್ದೆ ಗೆ ತಿದ್ದುಪಡಿ ತರಲು ಸಂಪುಟ ಸಭೆ ನಿರ್ಧರಿಸಿದೆ. ತಿದ್ದುಪಡಿ ವೇಳೆ ವಿಸ್ತ್ರೃತವಾದ ನಿಯಮಾವಳಿ ರೂಪಿಸಲಾಗುವುದು ಎಂದು ಹೇಳಿದ್ದಾರೆ. 
ರಾಜ್ಯದಲ್ಲಿ ನಾಯಿಂದ ಹಾಗೂ ಹಜಾಮ ಸಮುದಾಯಗಳ ಬಳಕೆಯನ್ನು ಕೈಬಿಟ್ಟು ಇನ್ನು ಮುಂದೆ ಈ ಸಮಾಜಗಳಿಗೆ ಸವಿತಾ ಸಮಾಜ ಎಂಬ ಪ್ರಮಾಣಪತ್ರಗಳನ್ನು ನೀಡುವಂತೆ ಸಂಪುಟ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT