ಶರವಾತಿ ಹಿನ್ನೀರು (ಸಂಗ್ರಹ ಚಿತ್ರ) 
ರಾಜ್ಯ

ಶರಾವತಿ ನದಿಯಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಸಾವು

ವಿಹಾರಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಶರಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ...

ಬೆಂಗಳೂರು: ವಿಹಾರಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಶರಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ಸಾಗರ ತಾಲ್ಲೂಕಿನ ಅಂಬರಗೋಡ್ಲು ಸಮೀಪದ ಶರಾವತಿ ಹಿನ್ನೀರಿನಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಗಳೂರಿನ ವಿಜಯನಗರ ಪ್ರಥಮ ದರ್ಜೆ ಕಾಲೇಜಿನ ಪ್ರತಾಪ್ ಮತ್ತು ರಾಜೇಶ್ ಎಂಬ  ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರತಾಪ್ ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಯಾಗಿದ್ದು, ಮತ್ತೋರ್ವ ಮೃತ ವಿದ್ಯಾರ್ಥಿ ರಾಜೇಶ್ ಲಗ್ಗೆರೆ ಮೂಲದವನೆಂದು  ತಿಳಿದುಬಂದಿದೆ.

ವಿಜಯ ನಗರ ಪ್ರಥಮ ದರ್ಜೆ ಕಾಲೇಜಿನ ಒಟ್ಟು 11 ವಿದ್ಯಾರ್ಥಿಗಳು ವಿಹಾರಕ್ಕೆ ತೆರಳಿದ್ದು, ಈ ವೇಳೆ ಶರಾವತಿ ಹಿನ್ನೀರಿನಲ್ಲಿ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ. ನೀರಿಗೆ ಇಳಿದ ಅಲ್ಪ  ಸಮಯದಲ್ಲೇ ರಾಜೇಶ್ ಕಾಲು ಮಣ್ಣಿನಲ್ಲಿ ಸಿಲುಕಿ ನೆರವಿಗಾಗಿಗ ಮೊರೆ ಇಟ್ಟಿದ್ದ. ಈ ಹಿನ್ನಲೆಯಲ್ಲಿ ಈಜು ಬರುತ್ತಿದ್ದ ಪ್ರತಾಪ್ ಆತನನ್ನು ರಕ್ಷಿಸಲು ಹೋಗಿದ್ದಾನೆ. ರಾಜೇಶ್ ಪ್ರಾಣಭಯದಿಂದ  ಪ್ರತಾಪ್ ನನ್ನು ಗಟ್ಟಿಯಾಗಿ ಹಿಡಿದ ಹಿನ್ನಲೆಯಲ್ಲಿ ಪ್ರತಾಪ್ ಈಜಲಾಗದೇ ಇಬ್ಬರೂ ಪ್ರಾಣ ಬಿಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ವಿದ್ಯಾರ್ಥಿಗಳ ಸಹಪಾಠಿ ಅರುಣ್ ಹೇಳಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT