ಬಿರು ಬಿಸಿಲಿಗೆ ತರಗುಟ್ಟಿದ ಉದ್ಯಾನನಗರಿ ಜನತೆ (ಸಂಗ್ರಹ ಚಿತ್ರ) 
ರಾಜ್ಯ

ಉದ್ಯಾನ ನಗರಿಯಲ್ಲಿ ದಾಖಲೆ ಬಿಸಿಲು; ಭಾನುವಾರ 39.2 ಡಿಗ್ರಿ ದಾಖಲು

ಉದ್ಯಾನನಗರಿ ಎಂದು ಖ್ಯಾತಿಯಾಗಿರುವ ಬೆಂಗಳೂರಿನಲ್ಲಿ ಮತ್ತೆ ದಾಖಲೆ ಉಷ್ಣಾಂಶ ದಾಖಲಾಗಿದ್ದು, ಭಾನುವಾರ ಬರೊಬ್ಬರಿ 39.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ...

ಬೆಂಗಳೂರು: ಉದ್ಯಾನನಗರಿ ಎಂದು ಖ್ಯಾತಿಯಾಗಿರುವ ಬೆಂಗಳೂರಿನಲ್ಲಿ ಮತ್ತೆ ದಾಖಲೆ ಉಷ್ಣಾಂಶ ದಾಖಲಾಗಿದ್ದು, ಭಾನುವಾರ ಬರೊಬ್ಬರಿ 39.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಭಾನುವಾರದ ಬೆಂಗಳೂರಿನ ಉಷ್ಣಾಂಶ 85 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದು, 85 ವರ್ಷಗಳ ಹಿಂದೆ ಅಂದರೆ 1931ರ ಏಪ್ರಿಲ್‌ 30ರಂದು ನಗರದಲ್ಲಿ 38.3 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿತ್ತು. ಇದು ಈ ವರೆಗಿನ  ಏಪ್ರಿಲ್‌ ತಿಂಗಳ ಗರಿಷ್ಠ ಉಷ್ಣಾಂಶವಾಗಿತ್ತು. ಆದರೆ ನಿನ್ನೆ ಬೆಂಗಳೂರಿನಲ್ಲಿ 39.2 ಡಿಗ್ರಿ ಉಷ್ಣಾಂಶ ದಾಖಲಾಗುವುದರೊಂದಿಗೆ ಈ ಹಿಂದಿನ  ದಾಖಲೆಯನ್ನು ಮುರಿದಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ಭಾನುವಾರ ಮಧ್ಯಾಹ್ನ 2.30 ರಿಂದ 4 ಗಂಟೆಯ ಅವಧಿಯಲ್ಲಿ ಈ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಮುಂಬರುವ  ದಿನಗಳಲ್ಲಿ ಬಿಸಿಲಿನ ಪ್ರಮಾಣ 38–39 ಡಿಗ್ರಿ ಸೆಲ್ಸಿಯಸ್‌ ಸಮೀಪದಲ್ಲಿಯೇ ಇರುವ ಲಕ್ಷಣಗಳಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ನಗರ ಮಾತ್ರವಲ್ಲ, ರಾಜ್ಯದ ವಿವಿಧೆಡೆ ಒಡಿಶಾ ಮತ್ತು  ಜಾರ್ಖಂಡ್‌ ರೀತಿಯಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳಲಿದೆ’ ಎಂದು ಹವಾಮಾನ ಇಲಾಖೆಯ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.

‘ಸಾಮಾನ್ಯವಾಗಿ ಅರಬ್ಬಿ ಸಮುದ್ರ ಮತ್ತು  ಬಂಗಾಳ ಕೊಲ್ಲಿ ಕಡೆಯಿಂದ ಬೀಸುವ ಗಾಳಿ ತೇವಾಂಶ ಹೊತ್ತು ತರುತ್ತದೆ. ಆದರೆ ಈ ಬಾರಿ ಆ ಗಾಳಿಯಲ್ಲಿ ತೇವಾಂಶವಿಲ್ಲದ ಕಾರಣ ಬಿಸಿಲಿನ ಧಗೆ  ಹೆಚ್ಚು ಎನಿಸುತ್ತಿದೆ. ನಗರದಲ್ಲಿ ಹೆಚ್ಚುತ್ತಿರುವ ಕಟ್ಟಡಗಳು ಮತ್ತು ರಸ್ತೆಗಳಿಗೂ ಕಾಂಕ್ರೀಟ್ ಬಳಕೆ, ವಾಹನಗಳ ಮತ್ತು ಜನಸಂಖ್ಯೆ ದಟ್ಟಣೆಯಂತಹ ಹಲವು ಕಾರಣಗಳಿಂದ ಬಿಸಿಲು  ಅಧಿಕವಾಗುತ್ತಿದೆ. ಕಳೆದ ಕೆಲ ದಿನಗಳ ವಾತಾವರಣ ಗಮನಿಸಿದರೆ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿವೆ’ ಎಂದು ಗೀತಾ ಅಗ್ನಿ ಹೋತ್ರಿ ಅಭಿಪ್ರಾಯಪಟ್ಟರು.

ಒಟ್ಟಾರೆ ಉದ್ಯಾನ ನಗರಿ ಮತ್ತು ರಾಜಧಾನಿ ಬೆಂಗಳೂರು ಮತ್ತೊಂದು ಬಿರು ಬೇಸಿಗೆಗೆ ಸಾಕ್ಷಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT