ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್ ಒಡೆದು ಹಾಕಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ತಿಳಿಯದೆಯೇ ಮೊಬೈಲ್ ಒಡೆದು ಹಾಕಿದ್ದಕ್ಕೆ ಅಕ್ರೋಶಗೊಂಡ ಮೊಮ್ಮಗನೊಬ್ಬ ಹೊಡೆದು ಅಜ್ಜಿಯನ್ನು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆಯೊಂದು ಬನಶಂಕರಿಯ ಕದಿರೇನಹಳ್ಳಿಯಲ್ಲಿ...

ಬೆಂಗಳೂರು: ತಿಳಿಯದೆಯೇ ಮೊಬೈಲ್ ಒಡೆದು ಹಾಕಿದ್ದಕ್ಕೆ ಅಕ್ರೋಶಗೊಂಡ ಮೊಮ್ಮಗನೊಬ್ಬ ಹೊಡೆದು ಅಜ್ಜಿಯನ್ನು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆಯೊಂದು ಬನಶಂಕರಿಯ ಕದಿರೇನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಲಕ್ಷ್ಮಮ್ಮ (99) ಕೊಲೆಯಾದ ಅಜ್ಜಿ. ಶಿವರಾಜ್ (22) ಹತ್ಯೆ ಮಾಡಿದ ಮೊಮ್ಮಗನಾಗಿದ್ದಾನೆ. ಘಟನೆ ನಂತರ ಶಿವರಾಜ್ ತಲೆಮರೆಸಿಕೊಂಡಿದ್ದಾನೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ನಿನ್ನೆ ರಾತ್ರಿ 8ರ ಸುಮಾರಿಗೆ ಮನೆಗೆ ಬಂದು ಮೊಬೈಲ್ ನ್ನು ಚಾರ್ಜ್ ಹಾಕಿ ಕುಳಿತುಕೊಂಡಿದ್ದಾನೆ. ಈ ವೇಳೆ ಕೋಲು ಹಿಡಿದುಕೊಂಡು ಬಂದಿದ್ದ ಅಜ್ಜಿಯ ಕೋಲಿಗೆ ಚಾರ್ಜರ್ ವೈಯರ್ ಸಿಕ್ಕಿಹಾಕಿಕೊಂಡಿದೆ. ಇದರಂತೆ ಮೊಬೈಲ್ ಕಳಗೆ ಬಿದ್ದು ಒಡೆದುಹೋಗಿದೆ.

ಮೊಬೈಲ್ ಒಡೆದು ಹೋಗಿದ್ದಕ್ಕೆ ಅಕ್ರೋಶಗೊಂಡ ಶಿವರಾಜ್ ಕೋಲು ತೆಗೆದುಕೊಂಡು ಅಜ್ಜಿಯ ಕತ್ತಿಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಅಜ್ಜಿಯನ್ನು ಮನೆಯವರೇ ರಕ್ತ ಒರೆಸಿ ಶುಶ್ರೂಷೆ ಮಾಡಿ ಔಷಧಿಯನ್ನು ಹಾಕಿ ಮಲಗಿಸಿದ್ದಾರೆ. ಮಲಗಿದ್ದ ಜಾಗದಲ್ಲೇ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಬನಶಂಕರಿ ಪೊಲೀಸರು ಶಿವರಾಜ್ ಗಾಗಿ ತೀವ್ರ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT