ರಾಜ್ಯ

ಕೊಪ್ಪಳ ಬಳಿ ಲಾರಿ-ಟ್ರ್ಯಾಕ್ಟರ್ ಡಿಕ್ಕಿ: ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವು

Lingaraj Badiger
ಕೊಪ್ಪಳ: ಕೊಪ್ಪಳ ಬಳಿ ಮದುವೆ ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕನ್ನೇರಮಡುವಿನಲ್ಲಿ ನಡೆದ ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಮೆತಗಲ್ ಬಳಿ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, 8 ಮಂದಿಯ ಸ್ಥಿತಿ ಗಂಭೀರವಾಗಿದೆ.
ವನಬಳ್ಳಾರಿ ಗ್ರಾಮದ ನಿವಾಸಿಗಳಾದ ರುದ್ರಪ್ಪ(70), ಹನುಮಪ್ಪ(65), ಗೌರಮ್ಮ(50), ರತ್ನಮ್ಮ(60) ಹಾಗೂ ಐದು ವರ್ಷದ ಬಾಲಕಿ ಅಪಘಾತದಲ್ಲಿ ಮೃತ ದುರ್ದೈವಿಗಳು.
ಈ ಸಂಬಂಧ ಮುನಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಬರ ಪ್ರವಾಸ ನಿಮಿತ್ತ ಕೊಪ್ಪಳದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.
SCROLL FOR NEXT