ಸೋಲಾರ್ ಪ್ಯಾನಲ್ 
ರಾಜ್ಯ

ಬಿಎಂಟಿಸಿ ಟ್ರಾನ್ಸಿಟ್ ನಿರ್ವಹಣಾ ಕೇಂದ್ರಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಕೆ

ವಿದ್ಯುತ್ ಶಕ್ತಿಗಾಗಿ ಬೆಸ್ಕಾಂ ಮೇಲೆ ಅವಲಂಬನೆಯನ್ನು ಕಡಿಮೆಗೊಳಿಸಲು ಬಿಎಂಟಿಸಿ ತನ್ನ ಸಂಚಾರ ಮತ್ತು ಟ್ರಾನ್ಸಿಟ್ ನಿರ್ವಹಣಾ ಕೇಂದ್ರಗಳ ಮೇಲೆ ಸೋಲಾರ್ ಪ್ಯಾನಲ್ ನ್ನು ಅಳವಡಿಸಲು ಯೋಜನೆ...

ಬೆಂಗಳೂರು: ವಿದ್ಯುತ್ ಶಕ್ತಿಗಾಗಿ ಬೆಸ್ಕಾಂ ಮೇಲೆ ಅವಲಂಬನೆಯನ್ನು ಕಡಿಮೆಗೊಳಿಸಲು ಬಿಎಂಟಿಸಿ ತನ್ನ ಸಂಚಾರ ಮತ್ತು ಟ್ರಾನ್ಸಿಟ್ ನಿರ್ವಹಣಾ ಕೇಂದ್ರಗಳ ಮೇಲೆ ಸೋಲಾರ್ ಪ್ಯಾನಲ್ ನ್ನು ಅಳವಡಿಸಲು ಯೋಜನೆ ರೂಪಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್ ರೂಪ್ ಕೌರ್, ಬಿಎಂಟಿಸಿಯ ಮಂಡಳಿ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಲಾಗುತ್ತದೆ ಒಪ್ಪಿಗೆಯಾದರೆ ಟೆಂಡರ್ ಕರೆಯುತ್ತೇವೆ ಎಂದಿದ್ದಾರೆ.
ಯೋಜನೆ ಬಗ್ಗೆ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಇಂಥದ್ದೇ ಒಂದು ಪ್ರಸ್ತಾವನೆ ಬಂದಿತ್ತು. ಆದರೆ ಸೋಲಾರ್ ಪ್ಯಾನಲ್ ನಿರ್ವಹಣೆ ಸವಾಲಿನ ಸಂಗತಿಯಾಗಿರುವುದರಿಂದ ಅದನ್ನು ಕೈಬಿಡಲಾಗಿತ್ತು ಎಂದು ತಿಳಿಸಿದ್ದಾರೆ. ಸೋಲಾರ್ ಪ್ಯಾನಲ್ ಗಳನ್ನು ಬಳಸಿ ಸಂಜೆ ವೇಳೆ ಬಿಎಂಟಿಸಿ ನಿರ್ವಹಣಾ ಕೇಂದ್ರಗಳಲ್ಲಿ ವಿದ್ಯುತ್ ಶಕ್ತಿ ಪಡೆಯಬಹುದು ಆದರೆ ರಾತ್ರಿ 10 ಗಂಟೆ ನಂತರ ಸೋಲಾರ್ ಪ್ಯಾನಲ್ ಗಳನ್ನೇ ಕದಿಯುವ ಸಾಧ್ಯತೆ ಇರುತ್ತದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.   
ಬಿಎಂಟಿಸಿ ಸಂಚಾರ ಮತ್ತು ಟ್ರಾನ್ಸಿಟ್ ನಿರ್ವಹಣಾ ಕೇಂದ್ರಗಳ ರೂಫ್ ಗಳನ್ನು ಬಾಡಿಗೆ ನೀಡಿದರೆ 6 ವರ್ಷಗಳಲ್ಲಿ ಶೇ.30 -40 ರಷ್ಟು ವಿದ್ಯುತ್ ಬೇಡಿಕೆಯನ್ನು ಸೋಲಾರ್ ಪವರ್ ಮೂಲಕ ಪೂರೈಸಬಹುದು ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಸಿಸ್ಟಮ್ಸ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ನ ಕಾರ್ಯದರ್ಶಿ ತಿಳಿಸಿದ್ದಾರೆ.
ಕಳೆದ ವರ್ಷ ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ ಸಹ ಇದೇ ಮಾದರಿಯಲ್ಲಿ ದೆಹಲಿ ಸಾರಿಗೆ ನಿಗಮದಲ್ಲೂ  ಸೋಲಾರ್ ಪ್ಯಾನಲ್ ನ್ನು ಅಳವಡಿಸುವ ಪ್ರಸ್ತಾವನೆ ಹೊಂದಿತ್ತು. ಆದರೆ ಅದು ಇನ್ನೂ ಜಾರಿಗೆ ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT