ಮುಖ್ಯಮಂತ್ರಿ ಸಿದ್ದರಾಮಯ್ಯ(ಸಾಂದರ್ಭಿಕ ಚಿತ್ರ) 
ರಾಜ್ಯ

ನನ್ನ ಯಶಸ್ಸಿನ ಹಿಂದೆ ಚಾಮುಂಡೇಶ್ವರಿ ಆಶೀರ್ವಾದ: ಸಿಎಂ ಸಿದ್ದರಾಮಯ್ಯ

ನಾಸ್ತಿಕ ಎಂದು ಕರೆದುಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು, ನನ್ನ ಯಶಸ್ಸಿನ ಹಿಂದೆ ತಾಯಿ ಚಾಮುಂಡೇಶ್ವರಿ...

ಮೈಸೂರು: ನಾಸ್ತಿಕ ಎಂದು ಕರೆದುಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು, ನನ್ನ ಯಶಸ್ಸಿನ ಹಿಂದೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವಿದೆ ಎಂದು ಹೇಳಿದ್ದಾರೆ. 
ಚಾಮುಂಡೇಶ್ವರಿ ವಿಧಾನಸಭಾ ವಿಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ರಾಜಕೀಯ ಯಶಸ್ಸಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ ಎಂದು ತಿಳಿಸಿದ್ದಾರೆ. 
ತಾಯಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ರಾಜಕೀಯ ವೃತ್ತಿ ಆರಂಭಿಸಿದೆ. ಅದೇ ರೀತಿ ಶಾಸಕ, ಸಚಿವ ಮತ್ತು ಮುಖ್ಯಮಂತ್ರಿಯಾಗಿದ್ದೇನೆ. ಇದರ ಜೊತೆಗೆ ಜನರು ನನ್ನ ಬೆಂಬಲಕ್ಕೆ ನಿಂತಿರುವುದೇ, ಇಲ್ಲಿಯವರೆಗಿನ ಯಶಸ್ಸಿಗೆ ಕಾರಣ ಎಂದು ಅವರು ಹೇಳಿದ್ದಾರೆ. 
ಚಾಮುಂಡಿ ಬೆಟ್ಟದಲ್ಲಿರುವ ದೈವಿ ವನ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಎಂ ಎಲ್ ಸಿ ಎಚ್ ವಿಜಯಶಂಕರ್ ಅವರ ಒತ್ತಾಯಕ್ಕೆ ಪ್ರತಿಕ್ರಯಿಸಿದ ಅವರು, ವಿಜಯಶಂಕರ್ ಅವರು ಧಾರ್ಮಿಕ ವ್ಯಕ್ತಿ ಆದರೆ, ನಾನು ನಂಬುವುದು ದೇವರು ನಮ್ಮ ಜೊತೆಯಲ್ಲಿದ್ದಾನೆಂದು. ಶ್ರೀಮಂತರು ದೇವಸ್ಥಾನ ಕಟ್ಟುತ್ತಾರೆ ಆದರೆ, ನನಗೆ ನನ್ನ ದೇಹವೇ ದೇಗುಲ ಎಂದು ಬಸವಣ್ಣನ ವಚನವನ್ನು ಹೇಳಿದ ಅವರು, ನಮಗೆ ಒಳ್ಳೆ ಹೃದಯವಿದ್ದರೆ, ದೇವರು ನಮ್ಮೊಂದಿಗೆ ಇರುತ್ತಾರೆ. ದೇವರನ್ನು ಮನದಲ್ಲಿ ಇಟ್ಟುಕೊಳ್ಳದೇ, ದೊಡ್ಡ ದೊಡ್ಡ ದೇವಸ್ಥಾನಗಳನ್ನು ಕಟ್ಟಿದರೇ ಏನು ಪ್ರಯೇಜನಾ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT